TUMAKURU NEWS : ಸಿದ್ದರಾಮೋತ್ಸವದಂತೆ ತುಮಕೂರಿನಲ್ಲಿ ಅದ್ಧೂರಿ ಕೆ. ಎನ್ ರಾಜಣ್ಣ ಅಮೃತ ಮಹೋತ್ಸವ ನಡೆಸಲು ತಯಾರಿ ಮಾಡಿಕೊಳ್ಳಲಾಗಿದೆ. ಏಪ್ರಿಲ್ 13 ರಂದು ರಾಜಣ್ಣ ಅಮೃತ ಮಹೋತ್ಸವ ಸಮಾರಂಭವನ್ನು ಪಹಲ್ಗಾಮ್ ದುರಂತವಾಗಿದ್ದರಿಂದ ಮುಂದೂಡಲಾಗಿತ್ತು. ಇದೀಗ ಜೂನ್ 21 ರ ಶನಿವಾರ ರಾಜಣ್ಣ ಅಮೃತ ಮಹೋತ್ಸವ ಸಮಾರಂಭವನ್ನು ನಡೆಸಸು ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು ನಿರ್ಧರಿಸಿದ್ದು, ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮ ಸಕಲ ತಯಾರಿ ಮಾಡಿಕೊಳ್ಳಲಾಗಿದೆ.
ತುಮಕೂರು ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ರಾಜಣ್ಣ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮವನ್ನು ಇದೇ ಶನಿವಾರ, ಬೆಳಗ್ಗೆ 10 ಗಂಟೆಗೆ ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಇಂದು ಕೆಎನ್ ಆರ್ ಅಭಿಮಾನ ಬಳಗದ ವತಿಯಿಂದ ಪೂರ್ವಭಾವಿ ಸಭೆಯನ್ನು ನಡೆಸಲಾಯ್ತು. ಸಭೆಯಲ್ಲಿ ರಾಜಣ್ಣ ಅಮೃತ ಮಹೋತ್ಸವದ ಪೋಸ್ಟರ್ನನ್ನು ಬಿಡುಗಡೆ ಮಾಡಲಾಯ್ತು. ಸಭೆಯಲ್ಲಿ ಕಾಂಗ್ರೆಸ್ ಮುಖಂಡ, ಗೆಳೆಯರ ಬಳಗದ ಗೋವಿಂದ ರಾಜು, ಮೊಹಮ್ಮದ್ ನಯಾಜ್ ಸೇರಿ ಹಲವರು ಭಾಗಿಯಾಗಿದ್ರು. ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷ ಮಂದಿ ಸೇರುವ ನಿರೀಕ್ಷೆಯಿದೆ.
ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಗೋವಿಂದರಾಜು, ರಾಜಣ್ಣ ಅವರಿಗೆ ತುಮಕೂರಿನಲ್ಲಿ ಮಾತ್ರವಲ್ಲದೇ ರಾಜ್ಯಾದ್ಯಂತ ಅಭಿಮಾನಿಗಳು ಇದ್ದು, ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ 2 ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾಗಲಿದ್ದಾರೆ ಎಂದ್ರು. ರಾಜಣ್ಣ ಅವರು ಸಹಕಾರ ಸಂಘದ ಮೂಲಕ ಸಾವಿರಾರು ಮಂದಿಗೆ ಸಹಾಯ ಮಾಡುವ ಮೂಲಕ ಜನರ ಪ್ರೀತಿಯನ್ನು ಗಳಿಸಿದ್ದಾರೆ, ಲಕ್ಷಾಂತರ ಮಂದಿ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ 2005 ರಲ್ಲಿ ತುಮಕೂರಿನಲ್ಲಿ ನಡೆದ ಅಹಿಂದ ಸಮಾವೇಶಕ್ಕಿಂತಲೂ ವಿಜೃಂಭಣೆಯಿಂದ ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಮಾಡಬೇಕು ಎಂದ್ರು.
ಇನ್ನು ಕೆ.ಎನ್ ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಲಕ್ಷಾಂತರ ಮಂದಿ ಭಾಗಿಯಾಗಲಿದ್ದು, ಕಾರ್ಯಕ್ರಮಕ್ಕಾಗಿ ಬೃಹತ್ ಪೆಂಡಾಲ್ನನ್ನು ಹಾಕಲಾಗಿದೆ. 75 ಸಾವಿರ ಮಂದಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಮಳೆ ಅಡ್ಡಿ ಆಗಬಾಗದಂತೆ ತಯಾರಿ ಮಾಡಿಕೊಳ್ಳಲಾಗಿದೆ. ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಗೃಹ ಸಚಿವ ಪರಮೇಶ್ವರ್, ಕೇಂದ್ರ ಸಚಿವ ಸೋಮಣ್ಣ ಸೇರಿದಂತೆ ಎಲ್ಲಾ ಪಕ್ಷಗಳ ಶಾಸಕರು, ಮುಖಂಡರು ಭಾಗಿಯಾಗಲಿದ್ದಾರೆ, ಅಲ್ದೇ ರಾಜ್ಯದ ಮೂಲೆ ಮೂಲೆಯಿಂದ ಲಕ್ಷಾಂತರ ಮಂದಿ ಅಭಿಮಾನಿಗಳು ಭಾಗಿಯಾಗಲಿದ್ದಾರೆ.