Cricket : ಇಂಗ್ಲೆಂಡ್‌ ಸರಣಿಯಲ್ಲಿ ಮೂವರು ಕನ್ನಡಿಗರಿಗೆ ಅವಕಾಶ..!

CRICKET : ಬಹು ನಿರೀಕ್ಷಿತ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್​ ಸರಣಿಗೆ ಬಿಸಿಸಿಐ ಕೊನೆಗೂ ಬಲಿಷ್ಠ ತಂಡವನ್ನು ಪ್ರಕಟಿಸಿದ್ದು, ವಿಶೇಷ ಅಂದರೆ ಈ ಬಾರಿಯ ಟೆಸ್ಟ್ ತಂಡದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಟೆಸ್ಟ್‌ ತಂಡದ ನಾಯಕ ಯಾರಾಗ್ತಾರೆ ಅನ್ನೋ ಪ್ರಶ್ನೆಗೂ ಉತ್ತರ ಸಿಕ್ಕಿದ್ದು, ಯುವ ಬ್ಯಾಟ್ಸ್‌ಮನ್‌ ಶುಭ್‌ಮನ್‌ ಗಿಲ್‌ಗೆ ಬಿಸಿಸಿಐ ನಾಯಕನ ಪಟ್ಟ ಕಟ್ಟಿದರೆ, ರಿಷಭ್‌ ಪಂತ್‌ಗೆ ಉಪನಾಯಕನ ಜವಾಬ್ದಾರಿಯನ್ನು ನೀಡಲಾಗಿದೆ.

ಸದ್ಯ ಪ್ರಕಟಗೊಂಡಿರೋ ತಂಡದಲ್ಲಿ ಕನ್ನಡಿಗರಾದ ವಿಕೆಟ್ ಕೀಪರ್ ಅಂಡ್ ಬ್ಯಾಟ್ಸಮನ್ ಕೆ.ಎಲ್.ರಾಹುಲ್, ಕರುಣ್ ನಾಯರ್ ಮತ್ತು ವೇಗಿ ಪ್ರಸಿದ್ಧ್ ಕೃಷ್ಣ ಅವರು ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಒಟ್ಟು ಮೂವರು ಕನ್ನಡಿಗರು ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಉಳಿದಂತೆ ತಂಡದಲ್ಲಿ ಶುಭ್ಮನ್ ಗಿಲ್‌, ರಿಷಬ್ ಪಂತ್, ಯಶಸ್ವಿ ಜೈಸ್ವಾಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ನಿತಿಶ್ ಕುಮಾರ್​ ರೆಡ್ಡಿ, ಧ್ರುವ್ ಜುರೇಲ್, ಆಲ್​ರೌಂಡರ್​ಗಳಾದ ರವೀಂದ್ರ ಜಡೇಜಾ, ವಾಷಿಗ್ಟಂನ್ ಸುಂದರ್. ಶಾರ್ದೂಲ್ ಠಾಕೂರ್ ಸ್ಥಾನ ಪಡೆದಿದ್ದರೆ, ಬೌಲರ್‌ ಗಳ ಕೋಟಾದಲ್ಲಿ ಜಸ್​ಪ್ರಿತ್ ಬೂಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಕುಲ್​ ದೀಪ್ ಯಾದವ್, ಆರ್ಶ್​ದೀಪ್ ಸಿಂಗ್​ ಸ್ಥಾನ ಪಡೆದುಕೊಂಡಿದ್ದಾರೆ.

ಜೂನ್ 20 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಮೊದಲ ಟೆಸ್ಟ್​ ಲೀಡ್ಸ್​ನಲ್ಲಿ ನಡೆಯಲಿದ್ದು, ಜುಲೈ 20 ರಿಂದ ಆರಂಭವಾಗಿ, 25ಕ್ಕೆ ಮುಗಿಯಲಿದೆ. ಎರಡನೇ ಟೆಸ್ಟ್ ಬರ್ಮಿಂಗ್​ ಹ್ಯಾಮ್​​ನಲ್ಲಿ ನಡೆಯಲಿದ್ದು, ಜುಲೈ 2 ರಿಂದ ಶುರುವಾಗಿ ಜುಲೈ 7 ರಂದು ಕೊನೆಯಾಗಲಿದೆ. ಮೂರನೇ ಟೆಸ್ಟ್ ಕ್ರಿಕೆಟ್ ಕಾಶಿ ಲಾರ್ಡ್ಸ್​​ನಲ್ಲಿ ಜುಲೈ 10 ರಿಂದ ಆರಂಭವಾಗಲಿದೆ. ನಾಲ್ಕನೇ ಟೆಸ್ಟ್ ಮ್ಯಾಚೆಂಸ್ಟರ್​​ನಲ್ಲಿ ಜುಲೈ 23 ರಿಂದ ನಡೆಯಲಿದೆ. ಕೊನೆಯ ಟೆಸ್ಟ್ ಪಂದ್ಯವು ಜುಲೈ 31 ರಂದು ಲಂಡನ್​​ನಲ್ಲಿ ನಡೆಯಲಿದೆ.

Author:

...
Sushmitha N

Copy Editor

prajashakthi tv

share
No Reviews