DEVANAHALLI : ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಒಂದೆಡೆ ರೈತರ ಮೊಗದಲ್ಲಿ ಸಂತಸ ಮೂಡಿದರೆ ಮತ್ತೊಂದು ಕಡೆ ಕೆಲಸಕ್ಕೆ ಹೋಗುವವರಿಗೆ, ವಿದ್ಯಾರ್ಥಿಗಳಿಗೆ, ವಾಹನ ಸವಾರರಿಗೆ ತಲೆನೋವಾಗಿದೆ. ಈ ಮಳೆಯಿಂದಾಗಿ ಅವಘಡಗಳು ಸಂಭವಿಸಿ ಸಾವು ನೋವುಗಳು ಸಂಭವಿಸಬಹುದು ಅನ್ನುವ ಕಾರಣಕ್ಕಾಗಿ ಆಯಾ ಜಿಲ್ಲಾಡಳಿತ ಇಲಾಖೆಗಳಿಗೆ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡುತ್ತೆ. ನಗರದಲ್ಲಿರುವ ಲೈಟ್ ಕಂಬ ಮತ್ತು ಹಾದು ಹೋಗಿರುವ ತಂತಿಗಳ ನಿರ್ವಹಣಗೆ ಸೂಚಿಸುತ್ತದೆ. ಇತ್ತ ಬೆಸ್ಕಾಂ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೂ ಕೂಡ ಸೂಕ್ತ ಸಲಕರಣೆಗಳನ್ನು ಒದಗಿಸಬೇಕೆಂದು ಎಷ್ಟೇ ಭಾರೀ ತಿಳಿಸಿದರೂ ಕೂಡ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಾರೆ. ಈ ಕಾರಣಕ್ಕೆ ಹಲವು ಸಿಬ್ಬಂದಿಗಳು ಲೈಟ್ ಕಂಬವೇರಿ ಸರಿಪಡಿಸುವ ವೇಳೆ ಸಾವನ್ನಪ್ಪಿತ್ತಿದ್ದಾರೆ. ಬೆಸ್ಕಾಂ ಅಧಿಕಾರಿಗಳು ಮಾಡಿರುವ ಒಂದೇ ಒಂದು ಯಡವಟ್ಟಿನಿಂದಾಗಿ ಬೆಂಗಳೂರು ಗ್ರಾಮಾಂತರ ದೇವನಹಳ್ಳಿಯಲ್ಲಿ ಬೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ್ದಾನೆ.
ಬೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ದೇವನಹಳ್ಳಿ ತಾಲ್ಲೂಕಿನ ಬೆಟ್ಟಕೋಟೆ ಗ್ರಾಮದಲ್ಲಿ 45 ವರ್ಷದ ಜಯರಾಮ್ ಅನ್ನೋ ವ್ಯಕ್ತಿ ಅಸುನೀಗಿದ್ದಾನೆ. ದೇವನಹಳ್ಳಿ ಸಬ್ ಡಿವಿಜನ್ನ ಬೆಸ್ಕಾಂ ಇಲಾಖೆಯ ಭಾರೀ ನಿರ್ಲಕ್ಷ್ಯವು ಅಮಾಯಕ ವ್ಯಕ್ತಿಯ ಪ್ರಾಣ ಹೋಗಿದ್ದು,, ಕುಟುಂಬವೊಂದು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇತ್ತ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಅಂತ ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ಮನೆಯಲ್ಲಿದ್ದ ಜಯರಾಮ್ ನನ್ನು ಬೆಸ್ಕಾಂ ಅಧಿಕಾರಿಗಳು ಬಂದು ಕರೆದುಕೊಂಡು ಹೋಗಿದ್ದಾರೆ. ಗ್ರಾಮದಲ್ಲಿ ಲೈಟ್ ಕಂಬವೇರಿ ಲೈನ್ ಸರಿಪಡಿಸುವಂತೆ ತಿಳಿಸಿದ್ದಾರೆ. ಅದರಂತೆ ಜಯರಾಮ್ ಲೈಟ್ ಕಂಬವನ್ನೇರಿ ಕೆಲಸ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ. ಯಾವುದೇ ಸುರಕ್ಷತಾ ಕ್ರಮ ವಹಿಸದ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ದುರ್ಘಟನೆಯ ನಂತರ ಸ್ಥಳೀಯ ಬೆಸ್ಕಾಂ ಸಿಬ್ಬಂದಿಯ ಮೊಬೈಲ್ಗಳು ಸ್ವಿಚ್ ಆಫ್ ಆಗಿದ್ದು, ಘಟನೆಯನ್ನು ಮುಚ್ಚಿಹಾಕಲು ಪ್ರಯತ್ನ ನಡೆಯುತ್ತಿದೆ ಎನ್ನಲಾಗುತ್ತಿದೆ. ಇನ್ನು ಈ ಸಂಬಂಧ ಚನ್ನರಾಯಪಟ್ಟಣ ಪೊಲೀಸರಿಂದ ಲೈನ್ ಮ್ಯಾನ್ ಸಂತೋಷ್, ಬೂದಿಗೆರೆ ಜೆಇ ಯೋಗೇಶ್, ಎಇಇ ಲಕ್ಷ್ಮೀಕಾಂತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.