Dhoni : ಗೆಲುವಿನ ಬೆನ್ನಲ್ಲೇ ಸಿಎಸ್‌ಕೆಗೆ ಶಾಕ್‌ | ಟೂರ್ನಿಯಿಂದಲೇ ತಲಾ ಔಟ್‌?

Dhoni :

ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರುತುರಾಜ್ ಗಾಯಕ್ವಾಡ್ ಅವರ ಮುಂದಾಳತ್ವದಲ್ಲಿ ಕಣಕ್ಕಿಳಿದಿತ್ತು. ಆದರೆ ರುತುರಾಜ್ ಮೊಣಕೈ ಮೂಳೆ ಮುರಿತಕ್ಕೊಳಗಾಗಿರುವ ಕಾರಣ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಮಹೇಂದ್ರ ಸಿಂಗ್‌ ಧೋನಿಯೇ ಸಿಎಸ್​ಕೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಧೋನಿ ಕೂಡ ಇದೀಗ ಗಾಯಗೊಂಡಿದ್ದು, ಮುಂದಿನ ಪಂದ್ಯಗಳಲ್ಲಿ ಅವರು ಕಾಣಿಸ್ತಾರಾ ಇಲ್ವಾ ಅನ್ನೋ ಅನುಮಾನ ಮೂಡ್ತಿದೆ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಧೋನಿ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಜೊತೆಗೆ ತಂಡವನ್ನು ಗೆಲ್ಲಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಈ ಪಂದ್ಯದಲ್ಲಿ ಧೋನಿ ಕಾಲಿನ ಸಮಸ್ಯೆ ಎದುರಿಸುತ್ತಿರುವುದು ಕಂಡುಬಂದಿತ್ತು. ಇನ್ನು ಪಂದ್ಯ ಮುಗಿದ ನಂತರವೂ ಧೋನಿ ನೋವಿನಿಂದ ಬಳಲುತ್ತಿದ್ದುದು ಕಾಣಿಸಿತ್ತು. ಜೊತೆಗೆ ಪಂದ್ಯದ ಬಳಿಕ ಹೋಟೆಲ್​ನಲ್ಲಿ ಕಾಣಿಸಿಕೊಂಡಿದ್ದ ಧೋನಿ ಕುಂಟುತ್ತಾ ಸಾಗುತ್ತಿದ್ದರು. ಇದು ಸಿಎಸ್‌ಕೆ ಅಭಿಮಾನಿಗಳ ಟೆನ್ಷನ್‌ಗೆ ಕಾರಣವಾಗಿದೆ.

ಇನ್ನು ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಪರ ಧೋನಿ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದು 11 ಎಸೆತ ಎದುರಿಸಿ, 26 ರನ್‌ಗಳನ್ನು ಗಳಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ 1 ಸಿಕ್ಸರ್ ಮತ್ತು 4 ಬೌಂಡರಿ ಸೇರಿದ್ದವು. ಆದರೆ ಇನ್ನಿಂಗ್ಸ್‌ನ ಕೊನೆಯ ಓವರ್‌ಗಳಲ್ಲಿ ಧೋನಿ ನಡೆದಾಡೋದಕ್ಕೂ ಪರದಾಡಿದ್ದರು. ಇದು ಸಿಎಸ್‌ಕೆ ಮ್ಯಾನೇಜ್‌ಮೆಂಟ್‌ನ ತಲೆನೋವಿಗೆ ಕಾರಣವಾಗಿತ್ತು.

ಈಗಾಗಲೇ ಗಾಯದ ಕಾರಣದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡವನ್ನು ಮಹೇಂದ್ರ ಸಿಂಗ್ ಧೋನಿ ಮುನ್ನಡೆಸುತ್ತಿದ್ದಾರೆ. ಇದೀಗ ಅವರು ಕೂಡ ಗಾಯಗೊಂಡಿರುವುದು CSK ಅಭಿಮಾನಿಗಳ ಚಿಂತೆ ಹೆಚ್ಚಿಸಿದೆ. ಸಿಎಸ್​ಕೆ ತಂಡವು ತನ್ನ ಮುಂದಿನ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ದ ಆಡಲಿದ್ದು, ಈ ಪಂದ್ಯಕ್ಕೆ ಧೋನಿ ಫಿಟ್‌ ಆಗ್ತಾರೋ ಇಲ್ವೋ ಅನ್ನೋದನ್ನು ಕಾದು ನೋಡಬೇಕಿದೆ.

Author:

...
Sushmitha N

Copy Editor

prajashakthi tv

share
No Reviews