TUMAKURU NEWS : ತುಮಕೂರು ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಿಮ ಘಟ್ಟದಲ್ಲಿರುವ ೩೦ ಒಐಆ ಸಾಮರ್ಥ್ಯದ ತೃತೀಯ ಹಂತದ ಕೊಳಚೆ ನೀರು ಶುದ್ಧೀಕರಣ ಘಟಕದ ಕಾಮಗಾರಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು ಒಂದು ತಿಂಗಳ ಒಳಗೆ ಶುದ್ಧೀಕರಣ ಘಟಕ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಕೊಳಚೆ ನೀರನ್ನು ಶುದ್ಧೀಕರಿಸಿ ಪುನರ್ ಬಳಕೆ ಮಾಡುವ ಕ್ರಮ ಪರಿಸರ ಸ್ನೇಹಿಯಾಗಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಭೀಮಸಂದ್ರ ಬಳಿ ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ಕೊಳಚೆ ನೀರು ಶುದ್ಧೀಕರಣ ಕಾಮಗಾರಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು ಕಾಮಗಾರಿ ಸ್ಥಗಿತಗೊಳ್ಳಲು ಕಾರಣವಾಗಿದ್ದ ಭೂಸ್ವಾಧೀನ ಸಮಸ್ಯೆ ಈಗ ಬಗೆಹರಿದಿರುವುದರಿಂದ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ ಸೋಮಪ್ಪ ಕಡಕೋಳ, ಕೆಐಎಡಿಬಿ ಸಹಾಯಕ ಕಾರ್ಯ ಪಾಲಕ ಅಭಿಯಂತರ ರವಿಕುಮಾರ್ ಹಾಗೂ ಸಹಾಯಕ ಅಭಿಯಂತರ ಸುರೇಶ್, ಕಾಮಗಾರಿಯ ಗುತ್ತಿಗೆದಾರ ಅಶ್ವಿನ್ ಉಪಸ್ಥಿತರಿದ್ದರು.