ದೊಡ್ಡಬಳ್ಳಾಪುರ : ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರವನ್ನು ಕಸಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾರಸಂದ್ರ ಅಪಾರ್ಟ್ಮೆಂಟ್ ಬಳಿಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ ಕಲ್ಲುಪೇಟೆಯ ನಿವಾಸಿಗಳಾದ ರಮೇಶ್ ದಂಪತಿಗಳು ಸರ ಕಳೆದುಕೊಂಡವರಾಗಿದ್ದಾರೆ.
ರಮೇಶ್ ದಂಪತಿಗಳು ಅನಾರೋಗ್ಯ ಹಿನ್ನಲೆ ರಾಜನಕುಂಟೆ ಆಸ್ಪತ್ರೆಗೆ ತೆರಳಿ ಮನೆಗೆ ವಾಪಾಸಾಗುತ್ತಿದ್ದ ವೇಳೆ ಮುಸುಕು ಮಾಸ್ಕ್ ಧರಿಸಿ ನಂಬರ್ ಪ್ಲೇಟಿಲ್ಲದ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಹಿಳೆಯ ಕೊರಳಲ್ಲಿದ್ದ ಸುಮಾರು 5 ಲಕ್ಷ ಬೆಲೆ ಬಾಳುವ 45 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿ ಕ್ಯಾಮರಾ ದೃಶ್ಯವನ್ನಾಧರಿಸಿ ತನಿಖೆ ನಡೆಸುತ್ತಿದ್ದಾರೆ.