Doddaballapura : ಸ್ನೇಹಿತರ ನಡುವೆ ಜಗಳ | ಹಲ್ಲೆ ಮಾಡಿ ಸ್ನೇಹಿತನ ಕೊಲೆ

DODDABALLAPURA: ಸ್ನೇಹಿತರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ದುರ್ಘಟನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹೆಗ್ಗಡಿಹಳ್ಳಿ ಬಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಿಜಯಕುಮಾರ್ (29) ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿಯಾಗಿರುವ ಸ್ನೇಹಿತ ಪೂಜಪ್ಪ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂಲತಃ ಮಾಲೂರು ಮೂಲದ ಇಬ್ಬರು ಕಾರ್ಮಿಕರು, ಜಲಜೀವನ್ ಮಿಷನ್ ಯೋಜನೆಯಡಿ ಗಾರೆ ಕೆಲಸ ನಿರ್ವಹಿಸುತ್ತಿದ್ದರು. ಈ ನಡುವೆ ವಿಜಯಕುಮಾರ್‌ ಅವರ ಪತ್ನಿ ವಿಚಾರದಲ್ಲಿ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ಉಂಟಾಗಿದ್ದು, ಜಗಳ ತಾರಕಕ್ಕೇರಿ ಪೂಜಪ್ಪ, ಮಾರಕಾಸ್ತ್ರದಿಂದ ವಿಜಯಕುಮಾರ್ ತಲೆಗೆ ಜೋರಾಗಿ ಹೊಡೆದಿದ್ದಾರೆ.

ಗಂಭೀರವಾಗಿ ಗಾಯಗೊಂಡ ವಿಜಯಕುಮಾರ್‌ ಅವರನ್ನು ತಕ್ಷಣವೇ ಚಿಕ್ಕಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಸಂದರ್ಭದಲ್ಲೇ ಅವರು ಸಾವನ್ನಪ್ಪಿದ್ದಾನೆ.

ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೂಜಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews