RAIN EFFECT : ಮಡಿಕೇರಿ, ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದ ಪರಿಣಾಮ ಸಾಕಷ್ಟು ಅವಾಂತರಗಳು ಸಂಭವಿಸಿವೆ. ಕೊಡಗು ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ 400 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇನ್ನು ಕರೆಂಟ್ ಇಲ್ಲದೆ ಜನ ಪರದಾಡುವಂತಾಗಿದೆ.
ಇನ್ನು ವಿರಾಜಪೇಟೆಯಲ್ಲಿ ಈಗಾಗಲೇ ಕಾಳಜಿ ಕೇಂದ್ರ ಸ್ಥಾಪಿಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೂರು ದಿನಗಳಿಂದ ಅಬ್ಬರಿಸುತ್ತಿರುವ ಮಳೆಯ ಕಾರಣ ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಇನ್ನು ಜಿಲ್ಲೆಯಲ್ಲಿ ವಿದ್ಯುತ್ ಸಂಪರ್ಕ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಚೆಸ್ಕಾಂ ಇಲಾಖೆ ವಿದ್ಯುತ್ ವ್ಯವಸ್ಥೆ ಮರುಸ್ಥಾಪನೆಗೆ ಕಸರತ್ತು ನಡೆಸಿದೆ.
ಹಾಸನ ಶಾಸಕ ಪೊನ್ನಣ್ಣನವರು ಚೆಸ್ಕಾಂ ಕಷ್ಟಕ್ಕೆ ಸ್ಪಂದಿಸಿದ್ದು, ಮಂಡ್ಯ, ಮೈಸೂರು, ಚಾಮರಾಜನಗರದಿಂದ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದೆ. ಈ ಮಧ್ಯ ಮಳೆಯ ಅನಾಹುತದಿಂದ ವಿರಾಜಪೇಟೆ ನಗರದ ನೆಹರು ನಗರದಲ್ಲಿ ಬೃಹತ್ ಮೆವೊಂದು ಮಾಜಿ ಸೈನಿಕ ಗಣೇಶ್ ಎಂಬುವವರ ಮನೆ ಮೇಲೆ ಉರುಳಿದೆ. ಇದರಿಂದಾಗಿ ಮನೆ ಬಾಗಶಃ ಹಾನಿಯಾಗಿದೆ.
ಇನ್ನು ನಗರದ ಸಂತ ಅನ್ನಮ್ಮ ಶಾಲೆಯ ಸಭಾಂಗಣದಲ್ಲಿ ವಿರಾಜಪೇಟೆ ಪುರಸಭೆ ವತಿಯಿಂದ ಕಾಳಜಿ ಕೇಂದ್ರ ತೆರೆಯಲಾಗಿದೆ. ದಿನಬಳಕೆ ವಸ್ತುಗಳನ್ನು ಕೂಡ ಸಂಗ್ರಹಿಸಲಾಗಿದ್ದು, ಬೆಟ್ಟ ಪ್ರದೇಶಗಳಲ್ಲಿ ನೆಲೆಸಿರುವವರು ಕಾಳಜಿ ಕೇಂದ್ರಕ್ಕೆ ತೆರಳುವಂತೆ ಸೂಚಿಸಲಾಗಿದೆ.