BANGALORE : ಅಧಿಕೃತ ಟಿಕೆಟ್ ಮತ್ತು ಪಾಸ್ ಹೊಂದಿದವರಿಗೆ ಮಾತ್ರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ (Chinnaswamy Stadium) ಆರ್ಸಿಬಿ (RCB) ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ. ಚಿನ್ನಸ್ವಾಮಿ ಕ್ರೀಡಾಂಗಣದತ್ತ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಕೆಎಸ್ಸಿಎ (KSCA) ವತಿಯಿಂದ ಆಯೋಜನೆಯಾಗಿರುವ ಈ ಸಮಾರಂಭವು ಇಂದು ಸಂಜೆ 5 ಗಂಟೆಗೆ ಆರಂಭವಾಗಲಿದೆ. ಐಪಿಎಲ್ ಪ್ರಶಸ್ತಿ ಗೆದ್ದ RCB ತಂಡದ ಎಲ್ಲಾ ಆಟಗಾರರು ಈ ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ. ಅಭಿಮಾನಿಗಳ ಭಾರೀ ನಿರೀಕ್ಷೆಯ ನಡುವೆ, ಕಾರ್ಯಕ್ರಮವನ್ನು ಅತ್ಯಂತ ಶಿಸ್ತಿನಿಂದ ನಡೆಸುವ ಉದ್ದೇಶದಿಂದ ಪ್ರವೇಶ ನಿಯಂತ್ರಣ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಿರ್ದಿಷ್ಟ ಪಾರ್ಕಿಂಗ್ ವ್ಯವಸ್ಥೆ ಮಾತ್ರ ಲಭ್ಯವಿರುವ ಹಿನ್ನೆಲೆಯಲ್ಲಿ, ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರ ಸಾಧ್ಯವಿಲ್ಲ. ಈ ಕಾರಣದಿಂದ ಕಾರ್ಯಕ್ರಮಕ್ಕೆ ಆಗಮಿಸುವವರು ಬಿಎಂಟಿಸಿ ಬಸ್ ಹಾಗೂ ನಂಮ್ಮ ಮೆಟ್ರೋ ಬಳಸಬೇಕೆಂದು ನಗರದ ಪೊಲೀಸರು ಸಾರ್ವಜನಿಕರಿಗೆ ವಿನಂತಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐತಿಹಾಸಿಕ ಆರ್ಸಿಬಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲು ಕಡ್ಡಾಯವಾಗಿ ಟಿಕೆಟ್ ಅಥವಾ ಪಾಸ್ ಅಗತ್ಯ. ಸಾರ್ವಜನಿಕರು ಯಾವುದೇ ಅಸೌಕರ್ಯಕ್ಕೀಡಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಗರ ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿದೆ.