ಕೊಡಗು : ಪರೀಕ್ಷೆಯಲ್ಲಿ ಫೇಲ್ | ಕಾಲೇಜು ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಕೊಡಗು : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜು ಹಾಸ್ಟೆಲ್‌ನಲ್ಲಿ ರಾಯಚೂರು ಮೂಲದ 19 ವರ್ಷದ ವಿದ್ಯಾರ್ಥಿನಿ ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ನಡೆದಿದೆ.

ತೇಜಸ್ವಿನಿ ಎಐಎಂಎಲ್ (ಆರ್ಟಿಷಿಶಿಯಲ್ ಇಂಟೆಲಿಜೆನ್ಸ್ ಅಂಡ್ ಮಷಿನ್ ಲರ್ನಿಂಗ್) ವಿಷಯದಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಮೂರು ದಿನಗಳ ಹಿಂದಷ್ಟೇ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದ ತೇಜಸ್ವಿನಿ, ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಸುದ್ದಿ ಆಕೆಯ ಕುಟುಂಬ ಹಾಗೂ ಸ್ನೇಹಿತರು ಶಾಕ್‌ ಆಗಿದ್ದಾರೆ.

ನೆನ್ನೆ ಮಧ್ಯಾಹ್ನ ತರಗತಿ ಮುಗಿಸಿ ಹಾಸ್ಟೆಲ್ಗೆ ಮರಳಿದ ತೇಜಸ್ವಿನಿ, ಸಂಜೆ 4 ಗಂಟೆ ಸುಮಾರಿಗೆ ತನ್ನ ಕೊಠಡಿಗೆ ಹೋಗಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಳು. ಸುಮಾರು 4.30ರ ವೇಳೆಗೆ ಸಹಪಾಠಿಗಳು ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನಲೆಯಲ್ಲಿ, ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಲಾಗಿದೆ. ನಂತರ ಬಾಗಿಲು ತೆರೆದು ನೋಡಿದಾಗ, ತೇಜಸ್ವಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಅವಳು ಬರೆದಿದ್ದ ಡೆತ್ನೋಟ್‌ನಲ್ಲಿ, ಪರೀಕ್ಷೆಯಲ್ಲಿ ಆರು ವಿಷಯಗಳಲ್ಲಿ ಬ್ಯಾಕ್ಲಾಗ್ ಇದ್ದು, ಓದಿನಲ್ಲಿ ಆಸಕ್ತಿಯಿಲ್ಲ ಎಂಬ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾಳೆ.

ಇನ್ನು ಘಟನಾ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು  ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಗಾರಕ್ಕೆ ಕಳಿಸಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದೆ.

 

Author:

...
Keerthana J

Copy Editor

prajashakthi tv

share
No Reviews