Farangipete : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ | ಆಟೋ ಚಾಲಕ ಸ್ಥಳದಲ್ಲೇ ದುರ್ಮರಣ

FARANGIPETE : ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆ ಸಮೀಪದ ಹತ್ತನೇ ಮೈಲ್ ಕಲ್ಲು ಎಂಬಲ್ಲಿ ಕೆಎಸ್‌ ಆರ್‌ ಟಿಸಿ ಬಸ್‌ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆಟೋ ಚಾಲಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಅಮೆಮ್ಮಾರ್‌ ಮೂಲದ ಪ್ರಸ್ತುತ ಹತ್ತನೇ ಮೈಲ್‌ ಕಲ್ಲಿನ ಫ್ಲಾಟ್‌ ನಲ್ಲಿ ವಾಸವಿದ್ದ ನಿವಾಸಿ ಝಾಹಿದ್‌ (28) ಎಂಬುವರು ಮೃತದುರ್ದೈವಿಯಾಗಿದ್ದಾರೆ.

ರಸ್ತೆ ದಾಟಲು ಹೆದರಿ ರಸ್ತೆ ಬದಿಯಲ್ಲಿ ನಿಂತಿದ್ದ ಮಕ್ಕಳನ್ನು ರಸ್ತೆ ದಾಟಿಸಲು ಹೋದಾಗ ಮಂಗಳೂರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯವಾದ ಪರಿಣಾಮ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಇತ್ತೀಚೆಗಷ್ಟೇ ಮೃತನ ತಂದೆ ಸಹ ತೀರಿಕೊಂಡಿದ್ದು, ಇದೀಗ ಇವರ ಸಾವಿನಿಂದ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ.

ವಿಷಯ ತಿಳಿದು ಸ್ಥಳೀಯ ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ. ಇನ್ನು ಈ ಘಟನೆಗೆ ಚಾಲಕರ ನಿರ್ಲಕ್ಷ್ಯವೇ ಕಾರಣವೆಂದು ಸ್ಥಳೀಯರು ಆರೋಪಿಸುತ್ತಿದ್ದು, ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸುತ್ತಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews