KOLAR NEWS : ನೂತನ ಚೆನ್ನೈ–ಬೆಂಗಳೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಇಂದು ಬೆಳಿಗ್ಗೆ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಎರಡು ಪ್ರಾಣಗಳನ್ನು ಬಲಿ ಪಡೆದಿರುವ ದಾರುಣ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಎಡಗಿನಬೆಲೆ ಟೋಲ್ ಬಳಿ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಮೃತರನ್ನು ರಾಜಸ್ಥಾನ ಮೂಲದ ಅಶೋಕ್ (28) ಮತ್ತು ಮೋಹನ್ ಲಾಲ್ (32) ಎಂದು ಗುರುತಿಸಲಾಗಿದೆ.
ಇನ್ನು ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಕಾರ್ಯಪ್ರವೃತ್ತರಾಗಿದ್ದಾರೆ. ಇನ್ನು ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹೈವೇ ಸಂಚಾರಕ್ಕೂ ಕೆಲಕಾಲ ವ್ಯತ್ಯಯ ಉಂಟಾಗಿದೆ. ಪರಿಣಾಮವಾಗಿ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ಕಂಡುಬಂದಿದೆ.