BANAGLORE : RCB ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

BANGALORE NEWS : ಐಪಿಎಲ್ ಫೈನಲ್ ಬಳಿಕ ನಡೆದ ವಿಜಯೋತ್ಸವ ಮೆರವಣಿಗೆಯ ಭೀಕರ ಅಂತ್ಯಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಬಳಿಯ ಕಾಲ್ತುಳಿತ ದುರಂತದ ಕುರಿತು ಕೊನೆಗೂ FIR ದಾಖಲಾಗಿದೆ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು RCB ಫ್ರಾಂಚೈಸಿ, ಕರ್ನಾಟಕ ಕ್ರಿಕೆಟ್ ಸಂಸ್ಥೆ (KSCA) ಹಾಗೂ ಡಿಎನ್ಎ ಮ್ಯಾನೇಜ್ಮೆಂಟ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ (Bharatiya Nyaya Sanhita) ಸೆಕ್ಷನ್ 195 ಅಡಿಯಲ್ಲಿ ನಿರ್ಲಕ್ಷ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ. ಈ ಮೊದಲು ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಕೇವಲ ಯುಡಿಆರ್ (Unnatural Death Report) ದಾಖಲಿಸಿದ್ದರು. ಆದರೆ 11 ಮಂದಿಯ ಮರಣಕ್ಕೆ ಕಾರಣವಾದ ನಿರ್ಲಕ್ಷ್ಯದ ಬಗ್ಗೆ ಕೇಳಿಬಂದ ಆಕ್ರೋಶದ ಹಿನ್ನಲೆಯಲ್ಲಿ ಇದೀಗ ಅಧಿಕೃತವಾಗಿ ಕ್ರಿಮಿನಲ್ ಎಫ್ಐಆರ್ ದಾಖಲಾಗಿದೆ.

ಜೂನ್ 3 ರಂದು ಐಪಿಎಲ್ ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡ ಪಂಜಾಬ್ ಕಿಂಗ್ಸ್‌ನ್ನು ಸೋಲಿಸಿ ಐತಿಹಾಸಿಕವಾಗಿ ಮೊದಲ ಬಾರಿಗೆ ಟ್ರೋಫಿ ಗೆದ್ದಿತ್ತು. ಈ ಜಯದ ಖುಷಿಯಲ್ಲಿ RCB ಮ್ಯಾನೇಜ್ಮೆಂಟ್ ಹಾಗೂ KSCA ವತಿಯಿಂದ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ ಮೆರವಣಿಗೆ ಆಯೋಜಿಸಲಾಗಿತ್ತು.

ಆದರೆ ಯಾವುದೇ ಪೂರ್ವಸಿದ್ಧತೆ ಇಲ್ಲದೆ, ನಿರ್ವಹಣಾ ವೈಫಲ್ಯದ ನಡುವೆಯೇ ಲಕ್ಷಾಂತರ ಅಭಿಮಾನಿಗಳನ್ನು ಆಹ್ವಾನಿಸಲಾಗಿತ್ತು. ಪರಿಣಾಮ, ಜನಸಂದಣಿ ನಿಯಂತ್ರಣ ತಪ್ಪಿ, ಸ್ಟೇಡಿಯಂ ಬಾಗಿಲು ಮುಚ್ಚಿದ ಸ್ಥಿತಿಯಲ್ಲಿ ಜನರು ಒತ್ತಿ ನೂಕಿದಾಗ, ಭೀಕರ ಕಾಲ್ತುಳಿತ ಸಂಭವಿಸಿತು. ಈ ಘಟನೆಯಲ್ಲಿ 11 ಮಂದಿ ಅಭಿಮಾನಿಗಳು ದಾರುಣವಾಗಿ ಸಾವನ್ನಪ್ಪಿದರು.

ಈ ದುರ್ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು ಹಾಗೂ ಮೃತರ ಕುಟುಂಬಗಳು RCB, KSCA ಮತ್ತು ಕಾರ್ಯಕ್ರಮ ಆಯೋಜನೆಯಲ್ಲಿದ್ದ ಮ್ಯಾನೇಜ್ಮೆಂಟ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದರು. ಇದೀಗ FIR ದಾಖಲಾಗಿ, ಪ್ರಕರಣದ ತನಿಖೆ ಮುಂದುವರಿಯುತ್ತಿದೆ.

 

Author:

...
Keerthana J

Copy Editor

prajashakthi tv

share
No Reviews