ಬೆಂಗಳೂರು : ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಇಬ್ಬರ ವಿರುದ್ಧ FIR

ಬೆಂಗಳೂರು : ಕನ್ನಡ ಭಾಷೆಗೆ ಸಂಬಂಧಿಸಿದ ವಿವಾದಾತ್ಮಕ ಹೇಳಿಕೆಯನ್ನು ನೀಡಿದ ನಟ ಕಮಲ್ ಹಾಸನ್ ಭಾವ ಚಿತ್ರಕ್ಕೆ ಬೆಂಕಿ ಹಚ್ಚಿದವರ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ಅವರು ತಮ್ಮ ಹೊಸ ಚಿತ್ರ 'ಥಗ್ ಲೈಫ್' ಪ್ರಚಾರ ಸಂದರ್ಭದಲ್ಲಿ "ತಮಿಳಿನಿಂದ ಕನ್ನಡ ಹುಟ್ಟಿದ್ದು" ಎಂದು ಹೇಳಿಕೆ ನೀಡಿದ್ದರು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. ಬಸವೇಶ್ವರನಗರದ ಪವಿತ್ರ ಪ್ಯಾರಡೈಸ್ ಬಳಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರು ರವಿಕುಮಾರ್ ಮತ್ತು ಬಸವೇಶ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಘಟನೆಯನ್ನು ಖಂಡಿಸಿರುವ ಕರ್ನಾಟಕ ಚಿತ್ರಮಂದಿರ ವಾಣಿಜ್ಯ ಮಂಡಳಿ (KFCC), ಕಮಲ್ ಹಾಸನ್ ಸಾರ್ವಜನಿಕ ಕ್ಷಮೆಯಾಚನೆ ಮಾಡದಿದ್ದರೆ 'ಥಗ್ ಲೈಫ್' ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಘೋಷಿಸಿದೆ. ಈ ವಿವಾದವು ರಾಜ್ಯಾದ್ಯಾಂತ ಭಾರಿ ಪ್ರತಿಕ್ರಿಯೆಗಳನ್ನು ಹುಟ್ಟಿಸಿತು. ಕಮಲ್ ಹಾಸನ್ ಅವರ ಹೇಳಿಕೆಯನ್ನು ಕನ್ನಡಿಗರು ತೀವ್ರವಾಗಿ ವಿರೋಧಿಸುತ್ತಿದ್ದು, ಅವರು ಕ್ಷಮೆಯಾಚನೆ ಮಾಡುವುದರ ಮೂಲಕ ಮಾತ್ರ ಪರಿಸ್ಥಿತಿ ಸುಧಾರಿಸಬಹುದಾಗಿದೆ.

Author:

...
Keerthana J

Copy Editor

prajashakthi tv

share
No Reviews