ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಮೊದಲ ಕೋವಿಡ್‌ ಪ್ರಕರಣ

ಚಿಕ್ಕಮಗಳೂರು : ಕಾಫಿನಾಡು ಎಂದೇ ಪ್ರಸಿದ್ಧವಾದ ಚಿಕ್ಕಮಗಳೂರಿನಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಜಿಲ್ಲೆಯ ಆರೋಗ್ಯ ಇಲಾಖೆಗೆ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿದೆ. ಕೊಚ್ಚಿಯಲ್ಲಿ ಉದ್ಯೋಗದಲ್ಲಿದ್ದ 22 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇತ್ತೀಚೆಗೆ ರಜೆಗಾಗಿ ಚಿಕ್ಕಮಗಳೂರಿಗೆ ವಾಪಸ್ ಬಂದ ಈ ಯುವಕ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾದರು.

ಆಸ್ಪತ್ರೆಯ ವೈದ್ಯರು ಕೂಡಲೇ ಅನುಮಾನಿತ ಸೋಂಕಿತನೆಂದು ಯುವಕನ ಸ್ವಾಬ್ ಸ್ಯಾಂಪಲ್ ತೆಗೆದು ಹಾಸನದ ಲ್ಯಾಬ್‌ಗೆ ಕಳುಹಿಸಿದ್ದರು. ಇದೀಗ ಆರೋಗ್ಯ ಇಲಾಖೆಯ ಅಧಿಕೃತ ಹೆಲ್ತ್ ಬುಲೆಟಿನ್ ಪ್ರಕಾರ, ಪರೀಕ್ಷೆಯಲ್ಲಿ ಪಾಸಿಟಿವ್ ಕಂಡುಬಂದಿದೆ. ಈ ಯುವಕ ಚಿಕ್ಕಮಗಳೂರು ನಗರದ ನಿವಾಸಿಯಾಗಿದ್ದು, ಈಗ ವೈದ್ಯಕೀಯ ನಿಗಾವಣೆಯಲ್ಲಿದ್ದಾರೆ.

ಅವರ ಸಂಪರ್ಕದಲ್ಲಿದ್ದವರ ಪತ್ತೆಹಚ್ಚಿ ತಪಾಸಣೆ ಮತ್ತು ಹೋಮ್ ಕ್ವಾರಂಟೈನ್ ಕ್ರಮ ಆರಂಭವಾಗಿದೆ. ಜಿಲ್ಲಾ ಆರೋಗ್ಯ ಇಲಾಖೆ ಸಾರ್ವಜನಿಕರನ್ನು ಆತಂಕ ಪಡದೆ, ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮನವಿ ಮಾಡಿದೆ. ಮಾಸ್ಕ್ ಧರಿಸುವುದು, ಕೈ ತೊಳೆಯುವುದು, ಮತ್ತು ಭೌತಿಕ ಅಂತರ ಕಾಯ್ದುಕೊಳ್ಳುವುದು ಅನಿವಾರ್ಯ.

 

Author:

...
Keerthana J

Copy Editor

prajashakthi tv

share
No Reviews