ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಕೇಬಲ್ ಕಾರ್ ಸೇವೆ ಆರಂಭಿಸಲು ಅರಣ್ಯ ಇಲಾಖೆ ತನ್ನ ಅಧಿಕೃತ ಒಪ್ಪಿಗೆಯನ್ನು ನೀಡಿದೆ. ಪ್ರವಾಸೋದ್ಯಮ ಇಲಾಖೆ ಈ ಯೋಜನೆಗೆ ಕರ್ನಾಟಕ ಅರಣ್ಯ ಇಲಾಖೆ ಒಪ್ಪಿಗೆಯನ್ನು ನೀಡಿದೆ.
ನಂದಿ ಗ್ರಾಮದ ಸರ್ವೆ ಸಂಖ್ಯೆ 1ರ 0.86 ಹೆಕ್ಟೇರ್ ಅರಣ್ಯ ಭೂಮಿಯನ್ನು ಈ ಯೋಜನೆಗಾಗಿ ಬಳಸಲು ಕರ್ನಾಟಕ ಅರಣ್ಯ ಇಲಾಖೆ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಇತ್ತೀಚೆಗಷ್ಟೇ ಅಧಿಕೃತ ಪತ್ರ ಹೊರಡಿಸಿದ್ದು, ಸಂಬಂಧಿತ ಇಲಾಖೆಗಳು ಮುಂದಿನ ಹಂತದ ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ.
ಈ ಯೋಜನೆಯು ಪರಿಸರಪರಿಯ ದೃಷ್ಟಿಯಿಂದ ಯಾವುದೇ ಹಾನಿ ಆಗದಂತೆ ತಂತ್ರಜ್ಞಾನ ಹಾಗೂ ಪರಿಸರ ಸ್ನೇಹಿ ವಿಧಾನಗಳಲ್ಲಿ ರೂಪಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇನ್ನು ಬೆಟ್ಟಕ್ಕೆ ಕೇಬಲ್ ಕಾರ್ ಸೇವೆ ಆರಂಭಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಪ್ರವಾಸೋದ್ಯಮ ಇಲಾಖೆ ಯೋಜನೆಯಾಗಿದೆ.