MANDYA NEWS : ಕೃಷ್ಣರಾಜಸಾಗರ (KRS) ಅಣೆಕಟ್ಟಿನ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ತೀವ್ರವಾಗಿ ವಿರೋಧಿಸಿರುವ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು, ಈ ನಿರ್ಧಾರವನ್ನು ಖಂಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಜನತೆ ಹಾಗೂ ವಿವಿಧ ರೈತ ಸಂಘಟನೆಗಳು ಈಗಾಗಲೇ ಈ ಯೋಜನೆಗೆ ಗಂಭೀರ ತಿರಸ್ಕಾರ ವ್ಯಕ್ತಪಡಿಸಿರುವುದರ ನಡು ವೆಯೂ ಸರ್ಕಾರ ತಾನಿಟ್ಟ ಹೆಜ್ಜೆ ಹಿಂದಕ್ಕೆ ಹಾಕದಿರುವುದನ್ನು ಅವರು ಸೋಷಿಯಲ್ ಮೀಡಿಯಾದ ಮೂಲಕ ಪ್ರಶ್ನಿಸಿದ್ದಾರೆ. "ಇದು ಕೇವಲ ಒಂದು ಅಣೆಕಟ್ಟಲ್ಲ. ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ಅವರು ಹಂಚಿಕೊಂಡಿದ್ದಾರೆ.
ರಾಜ್ಯ ಸರ್ಕಾರದ ದುಂದು ವೆಚ್ಚದ ಯೋಜನೆ ವಿರುದ್ಧ ಆಕ್ರೋಶಸುಮಲತಾ ಅವರ ಅಭಿಪ್ರಾಯದಲ್ಲಿ, ಈ ಯೋಜನೆ ಮಂಡ್ಯದ ನಿಜವಾದ ಅಭಿವೃದ್ಧಿಗೆ ಸಂಬಂಧಿಸಿದಿಲ್ಲ. ಅದಕ್ಕೆ ಬದಲಾಗಿ, ಪವಿತ್ರ ಸ್ಥಳವೊಂದರ ಪರಿಸರವನ್ನು ಹಾಳು ಮಾಡುವ ಅರ್ಥಹೀನ ಯೋಜನೆಯಾಗಿದೆ. ಅವರು ಈ ಯೋಜನೆಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ. "ಶತಮಾನಗಳ ಇತಿಹಾಸವಿರುವ ಕನ್ನಂಬಾಡಿ ಕಟ್ಟೆಯ ಅಸ್ಥಿತ್ವಕ್ಕೆ ಧಕ್ಕೆ ತರುವ ಯಾವುದೇ ಯೋಜನೆಗೆ, ಸ್ವಾಭಿಮಾನಿ ಮಂಡ್ಯದ ಜನತೆ ಅವಕಾಶ ನೀಡಲಾರರು," ಎಂದು ತೀವ್ರ ಎಚ್ಚರಿಕೆ ನೀಡಿದ್ದಾರೆ.
ಈ ವಿಚಾರದಲ್ಲಿ ಮಂಡ್ಯದ ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೂಡ ಸರ್ಕಾರದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದ್ದು, ಪರಿಸರ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಕಾಪಾಡುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.