CHAMARAJANAGARA : ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಸರಕು ಸಾಗಣೆ ವಾಹನ | ಇಬ್ಬರಿಗೆ ಗಾಯ

CHAMARAJANAGARA NEWS : ಚಾಮರಾಜನಗರ ತಾಲ್ಲೂಕಿನ ಕುಳ್ಳೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಕೇರಳ ಮೂಲದ ಸರಕು ಸಾಗಾಣಿಕೆ ವಾಹನವೊಂದು ತಮಿಳುನಾಡು ಕಡೆಗೆ ಸಾಗುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಉರುಳಿ ಬಿದ್ದಿದೆ. ಘಟನೆಯು ಕುಳ್ಳೂರು ಕ್ರಾಸ್ ಸಮೀಪದಲ್ಲಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣವಾಗಿ ಹಾನಿಗೊಳಗಾಗಿದೆ.

ವಾಹನದಲ್ಲಿ ಪ್ರಯಾಣಿಸುತ್ತಿದ್ದ ರಘುಪತಿ ಮತ್ತು ದಾಮೋದರ್ ಎಂಬವರಿಗೆ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಾಮರಾಜನಗರ ಸರ್ಕಾರಿ ವೈದ್ಯಕೀಯ ಬೋಧನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳಿಂದ ತಿಳಿದುಬಂದಿದೆ. ಇನ್ನು ಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಚಾಲಕನ ನಿಯಂತ್ರಣ ತಪ್ಪಿದ ಕಾರಣವೇ ಇರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ತಕ್ಷಣವೇ ಪೊಲೀಸರು ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Author:

...
Keerthana J

Copy Editor

prajashakthi tv

share
No Reviews