ಗದಗ : ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ..!

ಗದಗ : ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದ ಬಳಿ ಇರುವ ಜಮೀನೊಂದರ ಬಾವಿಯಲ್ಲಿ ವ್ಯಕ್ತಿಯ ಶವವು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರೋಣ ಪಟ್ಟಣದ ಹಕಾರಿ ಕಾಲೋನಿ ನಿವಾಸಿ ಶಂಕ್ರಪ್ಪ (30) ಎಂಬುವರು ಮೃತ ದುರ್ದೈವಿಯಾಗಿದ್ದಾರೆ.

ಮುಗಳಿ ಗ್ರಾಮದ ಬಳಿ ಜಮೀನೊಂದರ ಬಾವಿಯಲ್ಲಿ ಶಂಕ್ರಪ್ಪನ ಶವ ಪತ್ತೆಯಾಗಿದ್ದು, ಶಂಕ್ರಪ್ಪನ ಮುಖ, ಎದೆ ಹಾಗೂ ಕುತ್ತಿಗೆಗೆ ಬಟ್ಟೆಯಿಂದ ಕಟ್ಟಿ, ಮೃತದೇಹಕ್ಕೆ ಹಾಸಿಗೆ ಸುತ್ತಿ ಬಾವಿಗೆ ಎಸೆದಿದ್ದಾರೆ. ಸುಮಾರು ಐದು ದಿನಗಳ ಹಿಂದೆ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಶಂಕ್ರಪ್ಪ ಪ್ರೀತಿಸಿ ಮದುವೆಯಾಗಿದ್ದು, ಆತನ ಪತ್ನಿ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆಕೆ ಹಾಗೂ ಆಕೆಯ ಪ್ರಿಯಕರ ಶಿವಕುಮಾರ್‌ ಸೇರಿ ಈ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಘಟನಾ ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ರೋಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews