CHIKKANAYAKANAHALLI NEWS : ಜನರ ಸಮಸ್ಯೆಗಳಿಗೆ ಸ್ಪಂದನೆ ನೀಡುವುದು ನಿಮ್ಮ ಕರ್ತವ್ಯ. ಅಧಿಕಾರಿಗಳೇ ಜನರ ಬಳಿಗೆ ಹೋಗಿ ಕೆಲಸ ಮಾಡಿ, ಕೆಲಸ ಮಾಡುವ ಮನಸ್ಸು ಇಲ್ಲದಿದ್ದರೆ, ಕ್ಷಮಿಸಿ, ಈ ಕ್ಷೇತ್ರವನ್ನು ಬಿಟ್ಟು ತೊಲಗಿ” ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ಅಧಿಕಾರಿ ಗಳಿಗೆ ಚಿಕ್ಕನಾಯಕನಹಳ್ಳಿಯಲ್ಲಿ ಖಡಕ್ ಎಚ್ಚರಿಕೆ ನೀಡಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, “ರಾಜ್ಯದ 224 ಕ್ಷೇತ್ರಗಳಲ್ಲಿ ಪ್ರತಿವಾರ ಸಂಜೆ 4 ಗಂಟೆಗೆ ಜನಸ್ಪಂದನಾ ಹಾಗೂ ಮನೆ ಬಾಗಿಲಿಗೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಮ್ಮ ಕ್ಷೇತ್ರದಲ್ಲಿ ಈ ಕಾರ್ಯ ಕ್ರಮಬದ್ಧವಾಗಿ ನಡೆಯುತ್ತಿದೆ. ಆದರೆ, ಅಧಿಕಾರಿಗಳ ಸ್ಪಂದನೆ ಕಂಡುಬರುತ್ತಿಲ್ಲ. ಈ ಸ್ಥಿತಿಯಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲವೆಂದು ದೂರು ಹಾಕುವ ಅಧಿಕಾರಿಗಳಿಗೆ ಇದು ಸೂಕ್ತ ಸ್ಥಳವಲ್ಲ,” ಎಂದು ಶಾಸಕರು ಹೇಳಿದರು.
ಇದೇ ವೇಳೆ ತಾಲ್ಲೂಕಿನಲ್ಲಿ 35 ಬಾಲಗರ್ಭಿಣಿಯರ ಮದ್ಯೆ, ಜಿಲ್ಲೆಯಲ್ಲಿ 1453 ಹಾಗೂ ರಾಜ್ಯದಲ್ಲಿ 26,469 ಬಾಲಗರ್ಭಿಣಿಯರಿದ್ದಾರೆ ಎಂಬ ಅಂಕಿ ಅಂಶವನ್ನು ಅವರು ಮಂಡಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ʼನಾವೆಲ್ಲ ಒಟ್ಟಾಗಿ ಸೇರಿ ಪೋಕ್ಸೋ ಪ್ರಕರಣದ ಕುರಿತು ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದ್ರು.
ಇನ್ನು ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕರು. ಜನರ ಪರವಾಗಿ ನಾವು ಕೆಲಸ ಮಾಡಬೇಕು. ನಮ್ಮ ತಾಲೂಕಿನಲ್ಲಿ ಬಾಲ್ಯವಿವಾಹ ಮತ್ತು ಪೋಕ್ಸೋ ಪ್ರಕರಣಗಳ ಬಗ್ಗೆ ಅಧಿಕಾರಿಗಳು ಹೆಚ್ಚು ಒತ್ತು ಕೊಡಬೇಕು. ಪ್ರಕರಣಗಳು ಕಂಡಬಂದ್ರೆ ಕೂಡಲೇ ಅಲ್ಲಿಗೆ ದಾವಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು ಎಂದರು.