ಕಲಬುರಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಿರಾಣಿ ಅಂಗಡಿ ಸಂಪೂರ್ಣ ಸುಟ್ಟು ಕರಕಲು

ಕಲಬುರಗಿ : ಕಲಬುರಗಿ ಜಿಲ್ಲೆಯ ಹೊರವಲಯದ ಕೂಟನೂರ ಗ್ರಾಮದಲ್ಲಿ ಕಳೆದ ರಾತ್ರಿ ತಡವಾಗಿ ಸಂಭವಿಸಿದ ಅಗ್ನಿ ಅವಗಢದಿಂದಾಗಿ ಒಂದು ಕಿರಾಣಿ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಈ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಂದು ಶಂಕಿಸಲಾಗಿದೆ.

ನೆನ್ನೆ ತಡರಾತ್ರಿ, ಹನುಮಂತರಾವ್ ಬಸವಣ್ಣಪ್ಪ ಮಾಲಿಪಾಟೀಲ್ ಎಂಬುವವರಿಗೆ ಸೇರಿದ ಕಿರಾಣಿ ಅಂಗಡಿಯಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿಯು ವ್ಯಾಪಕವಾಗಿ ಹರಡಿದ್ದು, ಅಂಗಡಿಯಲ್ಲಿ ಸಂಗ್ರಹವಾಗಿದ್ದ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ.

ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ನಂತರ, ಅಗ್ನಿಶಾಮಕ ಸಿಬ್ಬಂದಿ ತುರ್ತು ಸ್ಪಂದನೆ ನೀಡಿದ್ದು, ಬೆಂಕಿಯನ್ನು ಹೆಚ್ಚು ಹಾನಿ ಆಗುವ ಮೊದಲು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಅಗ್ನಿ ಅವಗಢದಿಂದಾಗಿ ಅಂಗಡಿ ಮಾಲಿಕರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಅಂಗಡಿಯೊಳಗಿನ ಆಹಾರ ಸಾಮಗ್ರಿಗಳು, ಪ್ಯಾಕೆಜ್ಡ್ ಗೂಡ್ಸ್, ದಿನಸಿ ಪದಾರ್ಥಗಳು ಸೇರಿದಂತೆ ಎಲ್ಲಾ ವಸ್ತುಗಳು ಸಂಪೂರ್ಣ ನಾಶವಾಗಿವೆ.

 

Author:

...
Keerthana J

Copy Editor

prajashakthi tv

share
No Reviews