ಗುಬ್ಬಿ : ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರುದ್ಧ ಬಿಜೆಪಿ ಕಾರ್ಯಕರ್ತರು ನಡೆಸಲು ಯತ್ನಿಸುತ್ತಿರುವ ಪ್ರತಿಭಟನೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಬೃಹತ್ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಗುಬ್ಬಿಯಲ್ಲಿ ಸಾರ್ವಜನಿಕರ ಗುಂಪು ಸೇರುವಿಕೆಗೆ ತಡೆಯಾಗಿ ಜಿಲ್ಲಾಡಳಿತ 144 ಸೆಕ್ಷನ್ ಜಾರಿಗೆ ತಂದಿದ್ದು, ಯಾವುದೇ ರೀತಿಯ ಜಮಾವಣೆ ಅಥವಾ ಪ್ರತಿಭಟನೆಗೆ ಅನುಮತಿ ಇಲ್ಲ, ಅಲ್ಲದೇ ಯಾವುದೇ ಪಕ್ಷದ ಕಾರ್ಯಕರ್ತರು ಅಥವಾ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸುವುದು ಕಾನೂನು ಬಾಹಿರವೆಂದು ಪೊಲೀಸರು ಎಚ್ಚರಿಸಿದ್ದಾರೆ. ಇನ್ನು ಪ್ರತಿಭಟನೆಯಲ್ಲಿ ಭಾಗವಹಿಸುವಂತಹರನ್ನು ಪ್ರತಿಭಟನೆಗೂ ಮುಂಚಿತವಾಗಿ ವಶಕ್ಕೆ ಪಡೆಯಲು ಪೊಲೀಸರು ಸಜ್ಜಾಗಿದ್ದಾರೆ.
ನಿಟ್ಟೂರು ಸೇರಿದಂತೆ ಗುಬ್ಬಿ ತಾಲೂಕಿನ ಪ್ರಮುಖ ಪ್ರದೇಶಗಳಲ್ಲಿ ಪೊಲೀಸರು ಸಾಲು ಸಾಲಾಗಿ ನಿಯೋಜನೆಗೊಂಡಿದ್ದಾರೆ. ಭದ್ರತೆ ಹಿನ್ನೆಲೆಯಲ್ಲಿ ಸ್ಥಳೀಯ ಜನತೆಗೆ ಅನಾವಶ್ಯಕ ಚಲನೆಗಳನ್ನು ತಪ್ಪಿಸಲು ಸೂಚನೆ ನೀಡಲಾಗಿದೆ. ಶಾಂತಿಗಾಗಿ ಸಹಕರಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.