Gubbi : ಎತ್ತಿಗೆ ಜ್ವರ ಬಂದ್ರೆ ಕೋಣಕ್ಕೆ ಬರೆ | ಕಾಂಗ್ರೆಸ್ ವಿರುದ್ಧ ಬಿಜೆಪಿ ಗರಂ

GUBBI : ಆರ್‌ ಸಿಬಿ ವಿಜಯೋತ್ಸವ ಆಚರಣೆ ಮಾಡಿದ ಕಾಂಗ್ರೆಸ್ ಸರ್ಕಾರ 11 ಜನ ಕ್ರಿಕೆಟ್ ಅಭಿಮಾನಿಗಳ ಬಲಿ ಪಡೆದಿತ್ತು. ಈ ದುರಂತಕ್ಕೆ ಕಾಂಗ್ರೆಸ್ ಸರ್ಕಾರ ನೇರ ಹೊಣೆ. ಕೂಡಲೇ ಮುಖ್ಯಮಂತ್ರಿಗಳು ರಾಜೀನಾಮೆ ಸಲ್ಲಿಸಬೇಕು ಎಂದು ಬಿಜೆಪಿ ತಾಲ್ಲೂಕು ಘಟಕ ಗುಬ್ಬಿಯಲ್ಲಿ ಒತ್ತಾಯಿಸಿತು.

ಪಟ್ಟಣದ ಗುಬ್ಬಿ ವೀರಣ್ಣ ಸರ್ಕಲ್ ಬಳಿ ಜಮಾಯಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಆಗಿರುವ ದುರ್ಘಟನೆಗೆ ಬೇರೆಯವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿರುವ ಕಾಂಗ್ರೆಸ್ ಸರ್ಕಾರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜೀನಾಮೆ ಸಲ್ಲಿಸಬೇಕು ಎಂದು ಒಕ್ಕೊರಲಿನ ಒತ್ತಾಯ ಮಾಡಿದರು.

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ,  ಎತ್ತಿಗೆ ಜ್ವರ ಬಂದರೆ ಕೋಣ್ಣುಂಗೆ ಬರೆ ಎಂಬಂತೆ ಕಾಂಗ್ರೆಸ್ ಸರ್ಕಾರದ ನಡೆ ಕಂಡು ಬಂದಿದೆ. ಸರ್ಕಾರವೇ ಮುಂದೆ ನಿಂತು ವಿಜಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಿದೆ. ಕಾಲ್ತುಳಿತಕ್ಕೆ ಅಮಾಯಕರ ಬಲಿ ಪಡೆದು ಈಗ ಪೊಲೀಸ್ ಅಧಿಕಾರಿಗಳ ಮೇಲೆ ಆರೋಪ ಹೊರಿಸಿ ನುಣುಚಿಕೊಂಡಿದೆ. ಇದೆಲ್ಲಾ ಅಚಾತುರ್ಯಕ್ಕೆ ಸಿದ್ದರಾಮಯ್ಯ ಅವರೇ ಹೊಣೆ ಹೊರಬೇಕು ಎಂದು ಕಿಡಿಕಾರಿದರು.

ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಪಿ.ಬಿ.ಚಂದ್ರಶೇಖರಬಾಬು ಮಾತನಾಡಿ ಕ್ರಿಕೆಟ್ ಯಾವ ಸಂಸ್ಥೆ ಈ ವಿಜಯೋತ್ಸವ ಆಚರಣೆಗೆ ಒಪ್ಪಿಗೆ ನೀಡಿಲ್ಲ. ಪೊಲೀಸ್ ಇಲಾಖೆ ಕೂಡ ಸ್ಪಷ್ಟವಾಗಿ ಹೇಳಿತ್ತು ಕಾರ್ಯಕ್ರಮ ಮಾಡುವುದು ಬೇಡವೆಂದು. ಆದರೆ ಸರ್ಕಾರವೇ ಒತ್ತಾಯದಿಂದ ಆಯೋಜನೆ ಮಾಡಿ ಅಮಾಯಕ 11 ಜನರನ್ನು ಬಲಿ ಪಡೆದಿದೆ ಎಂದರು.

ಬಿಜೆಪಿ ಮಂಡಲದ ಮಾಜಿ ತಾಲ್ಲೂಕು ಅಧ್ಯಕ್ಷ ಪಂಚಾಕ್ಷರಿ ಮಾತನಾಡಿ ಪ್ರಚಾರದ ಗೀಳಿಗೆ ಬಿದ್ದು ಸಿಂಪತಿ ಗಿಟ್ಟಿಸಿಕೊಳ್ಳಲು ಮುಂದಾಗಿ 11 ಜನರ ಸಾವಿಗೆ ಕಾರಣವಾದ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಿದೆ. ಯಾರದ್ದೋ ತಪ್ಪಿಗೆ ಮತ್ಯಾರನ್ನೋ ಹೊಣೆ ಮಾಡಿ ಶಿಕ್ಷೆಯಾಗಿದೆ ಎಂದರು.

ಈ ವೇಳೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೈರಪ್ಪ,ತಾಲ್ಲೂಕು ಅಧ್ಯಕ್ಷ ಬಲರಾಮಯ್ಯ, ಪಟ್ಟಣ ಪಂಚಾಯ್ತಿ ಸದಸ್ಯ ಜಿ.ಆರ್.ಶಿವಕುಮಾರ್,  ಮುಖಂಡರಾದ ಯತೀಶ್, ಸಿದ್ದರಾಮಯ್ಯ, ಪುಟ್ಟರಾಜು, ಎಚ್.ಎಲ್.ಬಸವರಾಜು, ನರಸಿಂಹಮೂರ್ತಿ, ಇತರರು ಹಾಜರಿದ್ದರು.

Author:

...
Sushmitha N

Copy Editor

prajashakthi tv

share
No Reviews