Haveri : ಕಾರು ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ | ಸ್ಥಳದಲ್ಲೇ ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ

HAVERI : ಸಾರಿಗೆ ಬಸ್‌ಗೆ ಕಾರೊಂದು ಮುಖಾಮುಖಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದರೆ, ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್‌ ಬಳಿ ನಡೆದಿದೆ. ದಾವಣಗೆರೆ ಮೂಲದ ನಿವಾಸಿ ಪ್ರವೀಣ್ (36) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಸಾರಿಗೆ ಬಸ್‌ ಅಥಣಿಯಿಂದ ದಾವಣೆಗೆರೆಯತ್ತ ಬರುತ್ತಿದ್ದಾಗ, ಬೈಪಾಸ್‌ ನಲ್ಲಿ ಎದುರಿನಿಂದ ವೇಗವಾಗಿ ಬಂದ ಕಾರು ಬಸ್‌ ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರ ಎಂಬುವರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಸದ್ಯ ಈ ಸಂಬಂಧ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews