VIJAYANAGARA : ಹೊಸಪೇಟೆಯಲ್ಲಿ ಧಾರಾಕಾರ ಮಳೆ | ಜನಜೀವನ ಅಸ್ತವ್ಯಸ್ತ

VIJAYANAGARA NEWS : ವಿಜಯನಗರ ಜಿಲ್ಲೆಯ ಹೊಸಪೇಟೆ [HOSAPETE] ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸಾಧ್ಯವಾಗಿರುವುದರ ಜೊತೆಗೆ, ಶಾಲಾ ಮಕ್ಕಳಿಗೆ ತರಗತಿಗಳಿಗೆ ಹೋಗುವುದು ಹರಸಾಹಸವಾಗಿದೆ.

ಹೊಸಪೇಟೆ ನಗರದ ಬಹುತೇಕ ಭಾಗಗಳಲ್ಲಿ ಮಳೆ ನೀರು ನಿಂತಿದ್ದು, ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲ ಎಂಬದು ಸ್ಪಷ್ಟವಾಗಿದೆ. "ಕಾಲ್ಕೊಂಡಾಗಲೇ ಚರಂಡಿ ಕಾಮಗಾರಿಗಳನ್ನು ಪರಿಶೀಲಿಸಿ ಸ್ವಚ್ಛಗೊಳಿಸುತ್ತಿದ್ದರೆ, ಇಂತಹ ಪರಿಸ್ಥಿತಿ ಎದುರಾಗುತ್ತಿರಲಿಲ್ಲ" ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಕೌಲ್ ಪೇಟೆಯ ವಾರ್ಡ್ ನಂ. 19ರಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಸುಲೇಮಾನ್ ಎಂಬುವರ ಮನೆಯ ಗೋಡೆ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯರು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಪಾಲಿಕೆ ಮತ್ತು ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

 

Author:

...
Keerthana J

Copy Editor

prajashakthi tv

share
No Reviews