VIJAYANAGARA : ಭಾರೀ ಮಳೆ | ಮನೆ ಗೋಡೆ ಕುಸಿದು ಮಹಿಳೆಗೆ ಗಾಯ

VIJAYANAGARA NEWS : ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಅವಧಿಗಿಂತ ಮೊದಲೇ ಪ್ರವೇಶಿಸಿದ್ದು, ರಾಜ್ಯಾದ್ಯಂತ ಮಳೆ ಆರ್ಭಟಿಸುತ್ತಿದೆ. ಕಳೆದ ವಾರದಿಂದ ಕೊಂಚ ವಿಶ್ರಾಂತಿ ನೀಡಿದ್ದ ವರುಣ, ಮತ್ತೆ ಚುರುಕಾಗಲಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು  ಸುರಿದ ಭಾರೀ ಮಳೆಗೆ ಮನೆಗೊಡೆ ಕುಸಿದು ಮಹಿಳೆಯೊರ್ವರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಡೆಲಡಕು ಗ್ರಾಮದಲ್ಲಿ ನಡೆದಿದೆ. ಇನ್ನು ಮನೆಗೊಡೆ ಕುಸಿದ ಪರಿಣಾಮ ಹನುಮಕ್ಕ ಎಂಬ ಮಹಿಳೆ ಗಾಯಗೊಂಡಿದ್ದು, ಅವರನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Author:

...
Keerthana J

Copy Editor

prajashakthi tv

share
No Reviews