HELICOPTER CRASH: ಮೊನ್ನೆಯಷ್ಟೇ ಗುಜರಾತ್ ನ ಅಹಮದಾಬಾದ್ ನಲ್ಲಿ ವಿಮಾನ ಪತನಗೊಂಡು 241 ಮಂದಿ ತಮ್ಮ ಜೀವವನ್ನು ಕಳೆದುಕೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಪವಿತ್ರ ಧಾರ್ಮಿಕ ಕ್ಷೇತ್ರವಾದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡ ದುರ್ಘಟನೆ ನಡೆದಿದೆ. ಹವಾಮಾನ ವೈಪರಿತ್ಯದ ಕಾರಣದಿಂದಾಗಿ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್ ಸೇರಿದಂತೆ 7 ಮಂದಿ ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ ಎನ್ನಲಾಗ್ತಿದೆ.
ಇಂದು ಬೆಳಗ್ಗೆ ಉತ್ತರಾಖಂಡದ ಗೌರಿಕುಂಡದ ಅರಣ್ಯ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಆರ್ಯನ್ ಏವಿಯೇಷನ್ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಎನ್ನಲಾಗಿದೆ. ಹೆಲಿಕಾಪ್ಟರ್ ಗುಪ್ತಕಾಶಿ-ಕೇದಾರನಾಥ ಮಾರ್ಗದಲ್ಲಿ ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ವಿಷಯ ತಿಳಿದ ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಶವಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಮುಂದುವರೆದಿದೆ.