HIREHALLI: ಹುಣಸೇಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತುಮಕೂರು ತಾಲೂಕಿನ ಹಿರೇಹಳ್ಳಿ ಬಳಿ ನಡೆದಿದೆ. ಹಿರೇಹಳ್ಳಿ ಗ್ರಾಮದ ನಿವಾಸಿ ರವೀಂದ್ರ (52) ಮೃತ ದುರ್ದೈವಿಯಾಗಿದ್ದಾರೆ.
ರವೀಂದ್ರ ಮೂಲತಃ ಹಿರೇಹಳ್ಳಿ ಗ್ರಾಮದವರಾಗಿದ್ದು, ಕುಟುಂಬ ಸಮೇತ ಬೆಂಗಳೂರಿನ ಯಲಹಂಕದಲ್ಲಿ ವಾಸವಿದ್ದರು. ಅದರೆ ಕಳೆದ 4-5 ದಿನಗಳಿಂದ ನಾಪತ್ತೆಯಾಗಿದ್ದು, ಈ ಕುರಿತು ಯಲಹಂಕ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಆದರೆ ತನ್ನ ಹೂಟ್ಟೂರಿನ ಮನೆ ಮುಂದೆ ಇದ್ದ ಹುಣಸೇಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮೇಲ್ನೋಟಕ್ಕೆ ಸಾಲಭಾದೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು, ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ಕ್ಯಾತಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.