ಬೀದರ್ : ತೆಲಂಗಾಣ–ಬೀದರ್ ಗಡಿಯಲ್ಲಿ ಸಂಭವಿಸಿದ ಭೀಕರ ಲಾರಿ ಅಪಘಾತದಲ್ಲಿ ಓರ್ವ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಭೀಕರ ಅಪಘಾತ ಬೀದರ್ ಗಡಿಯ ತೆಲಂಗಾಣದ ಜಹೀರಾಬಾದ್ ಬಳಿ ಸಂಭವಿಸಿದೆ. ಹೈದರಾಬಾದ್ನಿಂದ ಬೀದರ್ ಜಿಲ್ಲೆಯ ಕಮಲನಗರ ಕಡೆಗೆ ಬರುತ್ತಿದ್ದ ಲಾರಿ ಪಂಚರ್ ಆಗಿ ರಸ್ತೆಯಲ್ಲಿ ನಿಂತಿತ್ತು. ಇದೇ ವೇಳೆ, ಹಿಂದಿನಿಂದ ಬಂದ ಮತ್ತೊಂದು ಲಾರಿ ಹಿಂಬದಿಯಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಕಮಲನಗರದ ನಿವಾಸಿ ಏಜಾಜ್ ಶೇಖ್ ಕಲಿಮೋದ್ದಿನ್ (37) ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ಧಾರೆ. ಇನ್ನೊಬ್ಬ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ತಕ್ಷಣವೇ ಸ್ಥಳೀಯ ಪೊಲೀಸರು ಧಾವಿಸಿ ತನಿಖೆ ಆರಂಭಿಸಿದ್ದಾರೆ. ಗಾಯಗೊಂಡ ಲಾರಿ ಸಹಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ತೀವ್ರವಾಗಿ ನಾಶವಾಗಿದ್ದು, ರಸ್ತೆಬದಿಯಲ್ಲೇ ಶೇಖ್ ಅವರ ಮೃತದೇಹ ಪತ್ತೆಯಾಗಿದೆ.