CHIKKABALLAPURA : ಶಾರ್ಟ್‌ ಸರ್ಕ್ಯೂಟ್‌ಗೆ ಮನೆ ಧಗಧಗ | ಲಕ್ಷಾಂತರ ಮೌಲ್ಯದ ವಸ್ತುಗಳು ಆಹುತಿ

CHIKKABALLAPURA NEWS : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಕೈವಾರ ಗ್ರಾಮದಲ್ಲಿ ಆಕಸ್ಮಿಕವಾಗಿ  ಅಗ್ನಿ ಅನಾಹುತ ಸಂಭವಿಸಿದ್ದು, ಮನೆಯಲ್ಲಿದ್ದ ವಿದ್ಯುತ್ಉಪಕರಣಗಳು ಸುಟ್ಟುಭಸ್ಮವಾಗಿದೆ.  ಕೈವಾರ ಗ್ರಾಮದ ನಿವಾಸಿ ಮಂಜುನಾಥ್ಎಂಬುವವರ ಮನೆಯಲ್ಲಿ ಇದಕ್ಕಿಂದ್ದಂತೆ ಶಾರ್ಟ್ಸರ್ಕ್ಯೂಟ್ಆಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ವಿದ್ಯುತ್ಅವಘಡ ಸಂಭವಿಸಿದ್ದು ಅದೃಷ್ಟವಶಾತ್ಯಾವುದೇ ಪ್ರಾಣಪಾಯ ಸಂಭವಿಸಿಲ್ಲ, ಆದ್ರೆ ಮನೆಯಲ್ಲಿದ್ದ ಬೆಲೆ ಬಾಳುವ ಫ್ರಿಡ್ಜ್‌, ವಾಷಿಂಗ್ಮಷಿನ್‌, ಫ್ಯಾನ್ಸ್‌, ಟಿವಿ ಸೇರಿ ಲಕ್ಷಾಂತರ ಮೌಲ್ಯದ ಎಲೆಕ್ಟ್ರಿಕ್ಉಪಕರಣಗಳು ಬೆಂಕಿಗಾಹುತಿಯಾಗಿವೆ.

ಮಂಜುನಾಥ್ ಕೈವಾರದ ನಾಡ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದರು  ಮಗನ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಹೋಗಿದ್ದರು. ಮನೆಯವರು ಇಲ್ಲದ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ತಕ್ಷಣವೇ ಬೆಂಕಿ ವ್ಯಾಪಿಸಿ ಸಂಪೂರ್ಣ ಮನೆಯನ್ನೇ ಆವರಿಸಿತು. ಸುಮಾರು ₹25 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಇತರ ಅಮೂಲ್ಯ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಯಾವುದೇ ಪ್ರಯೋಜನ ಆಗಿಲ್ಲ. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಂಜುನಾಥ್ ಕುಟುಂಬ ಆರ್ಥಿಕವಾಗಿ ನಷ್ಟಕ್ಕೆ ಒಳಗಾಗಿದ್ದು, ಕುರಿತು ಸರ್ಕಾರದಿಂದ ಸಹಾಯ ನೀಡಬೇಕೆಂದು ಆಗ್ರಹಿಸಿದ್ರು.

 

Author:

...
Keerthana J

Copy Editor

prajashakthi tv

share
No Reviews