CHIKKAMAGALURU NEWS : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಜನಪ್ರಿಯ ಪ್ರವಾಸಿ ತಾಣವಾದ ಕಲ್ಲತ್ತಗಿರಿ ಫಾಲ್ಸ್ ಬಳಿ ಇಂದು ಅಪಾಯ ತಪ್ಪಿದ ಘಟನೆ ನಡೆದಿದೆ. ಫಾಲ್ಸ್ಗೆ ಭೇಟಿ ನೀಡಿದ್ದ ಪ್ರವಾಸಿಗರ ಕಾರಿನ ಮೇಲೆ ಭಾರಿ ಗಾತ್ರದ ಮರವೊಂದು ಬಿದ್ದು, ವಾಹನ ಸಂಪೂರ್ಣವಾಗಿ ಜಖಂ ಆಗಿದೆ.
ಪ್ರವಾಸಿಗರು ಕಾರು ನಿಲ್ಲಿಸಿ ಫಾಲ್ಸ್ ವೀಕ್ಷಣೆಗೆ ತೆರಳಿದ್ದ ಸಮಯದಲ್ಲೇ ಗಾಳಿ ಮಳೆಗೆ ಬೆಡಗು ಸಹಿತ ಮರವು ಕಿತ್ತುಕೊಳ್ಳಿ ಕಾರಿನ ಮೇಲೆ ಬಿದ್ದಿದೆ. ಅದೃಷ್ಠವಷಾತ್, ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ.
ಇನ್ನು ಘಟನೆ ಮಾಹಿತಿ ತಿಳಿದ ಲಿಂಗದಹಳ್ಳಿ ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಆಡಳಿತವಿಭಾಗ ಹಾಗೂ ಅರಣ್ಯ ಇಲಾಖೆ ಸಹಯೋಗದೊಂದಿಗೆ ಮರದ ಓರಿಸಲು ಕ್ರಮ ಕೈಗೊಳ್ಳಲಾಗಿದೆ.