ದೇವನಹಳ್ಳಿ : ವಿಜಯಪುರ ಪಟ್ಟಣದಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ...!

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಪತ್ನಿಯನ್ನು ಹತ್ಯೆಗೈದು, ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿಜಯಪುರ ಪಟ್ಟಣದ ನಿವಾಸಿ ಸುಮಾ (38) ಹಾಗೂ ಪತಿ ಬಸವರಾಜ್‌ ಮೃತ ದುರ್ದೈವಿಯಾಗಿದ್ದಾರೆ.

ಬಸವರಾಜ್‌ ಎಂಬಾತ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ವಿಷಯ ತಿಳಿದು ವಿಜಯಪುರ ಪೊಲೀಸ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ-ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.

ಪೋಲಿಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರೆಸಿದ್ದಾರೆ. ಮೃತದೇಹಗಳನ್ನು ಪೋಸ್ಟ್‌ಮಾರ್ಟಂಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರಿಂದ ಹಾಗೂ ಹತ್ತಿರದವರಿಂದ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews