CRICKET : ಭಾರತ ಟೆಸ್ಟ್ ತಂಡ ಪ್ರಕಟ | ಗಿಲ್‌ಗೆ ನಾಯಕ ಪಟ್ಟ

ಕ್ರಿಕೆಟ್‌ : ಭಾರತ ಮತ್ತು ಇಂಗ್ಲೆಂಡ್ ನಡುವಿನ ಬಹು ನಿರೀಕ್ಷಿತ ಐದು ಪಂದ್ಯಗಳ ಟೆಸ್ಟ್ ಸರಣಿ ಜೂನ್ 20ರಿಂದ ಆರಂಭವಾಗಲಿದೆ. ಈ ಸರಣಿಗೆ ಟೀಂ ಇಂಡಿಯಾದ 18 ಸದಸ್ಯರನ್ನೊಳಗೊಂಡ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಪ್ರಮುಖ ಬೆಳವಣಿಗೆಯೆಂದರೆ, ಯುವ ಬ್ಯಾಟ್ಸ್‌ಮನ್ ಶುಭಮನ್ ಗಿಲ್ ಭಾರತ ಟೆಸ್ಟ್ ತಂಡದ ನೂತನ ನಾಯಕನಾಗಿ ನೇಮಕ ಆಗಿದ್ದಾರೆ. ವಿಕೆಟ್‌ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಬಳಿಕ ನಾಯಕನ ಸ್ಥಾನಕ್ಕಾಗಿ ನಡೆದ ಸ್ಪರ್ಧೆಯಲ್ಲಿ ಗಿಲ್ ಅವರು ಬಿಸಿಸಿಐ ವಿಶ್ವಾಸ ಗಳಿಸಿದ್ದಾರೆ. ಜಸ್ಪ್ರೀತ್ ಬುಮ್ರಾ, ಕೆ ಎಲ್ ರಾಹುಲ್, ಪಂತ್ ಅವರಂತೆ ಅನುಭವ ಪಡೆದ ಆಟಗಾರರ ನಡುವೆ ಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ.

8 ವರ್ಷದ ಬಳಿಕ ಕರುಣ್‌ ನಾಯರ್‌ ಟೀಂ ಇಂಡಿಯಾಗೆ ಮರಳಿದ್ದಾರೆ. 2017ರಲ್ಲಿ ತ್ರಿಶತಕ ಬಾರಿಸಿದ್ದರೂ ಬಳಿಕ ನಿರಂತರ ಸ್ಥಾನ ದೊರೆತಿರದ ಕರುಣ್ ನಾಯರ್, ಎಂಟು ವರ್ಷಗಳ ಬಳಿಕ ಪುನಃ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಜೊತೆಗೆ ಸಾಯಿ ಸುದರ್ಶನ್ ಮತ್ತು ವೇಗಿ ಅರ್ಷದೀಪ್ ಸಿಂಗ್ ಇದೇ ಮೊದಲು ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನು ಅನುಭವಿ ವೇಗಿ ಮೊಹಮ್ಮದ್ ಶಮಿ ಅವರು ಫಿಟ್ನೆಸ್ ಸಮಸ್ಯೆಗಳಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಸ್ಥಿತಿಯಲ್ಲಿ ಬುಮ್ರಾ ಮತ್ತು ಸಿರಾಜ್ ಮುಂಚೂಣಿ ವೇಗಿಗಳಾಗಿ ಮುಂದಾಗಲಿದ್ದಾರೆ.

ಭಾರತ ತಂಡದಲ್ಲಿ ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್,ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಅರ್ಷದೀಪ್ ಸಿಂಗ್ ಮತ್ತು ಕುಲದೀಪ್ ಯಾದವ್ ಇದ್ದಾರೆ.

ಈ ತಂಡದಿಂದ ಯುವ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದ್ದು, ನಾಯಕತ್ವದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಈ ಹೊಸ ತಂಡದ ಪ್ರದರ್ಶನ ಹೇಗಿರುತ್ತದೆ ಎಂಬುದು ಕ್ರೀಡಾಭಿಮಾನಿಗಳಲ್ಲಿ ಅಪಾರ ಕುತೂಹಲ ಎಬ್ಬಿಸಿದೆ.

Author:

...
Keerthana J

Copy Editor

prajashakthi tv

share
No Reviews