ಗುಬ್ಬಿ : ಸರ್ಕಾರದಿಂದ ಜನೌಷಧ ಕೇಂದ್ರ ಕ್ಲೋಸ್‌ | ಕಪ್ಪುಪಟ್ಟಿ ಧರಿಸಿ ಬಿಜೆಪಿಯಿಂದ ಪ್ರೊಟೆಸ್ಟ್‌

ಗುಬ್ಬಿ: ಡ್ರಗ್ ಮಾಫಿಯಾಗೆ ಮಣಿದ ರಾಜ್ಯ ಸರ್ಕಾರ ಬಡವರಿಗೆ ಆಧಾರವಾಗಿದ್ದ ಜನಔಷಧಿ ಕೇಂದ್ರಗಳನ್ನು ಮುಚ್ಚಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ಮುಖಂಡ ಎಸ್ ಡಿ ದಿಲೀಪ್ ಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಗುಬ್ಬಿಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ರು.

ಗುಬ್ಬಿಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಜನೌಷದಿ ಕೇಂದ್ರದ ಬಳಿ ದಿಢೀರ್ ಜಮಾಯಿಸಿದ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಮಾತನಾಡಿದ ದಿಲೀಪ್‌ ಕುಮಾರ್‌, ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿಯ ಯೋಜನೆ ಇದು. ಜನತೆ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ಎಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಈ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಿತ್ತು. ಆ ಮೂಲಕ ಬಡರಿಗೆ ಕಡಿಮೆ ವೆಚ್ಚದಲ್ಲಿ ಔಷಧಿಗಳನ್ನು ನೀಡುತ್ತಿತ್ತು. ಈಗ ಕೇಂದ್ರ ಸರ್ಕಾರ ಏಕಾಏಕಿ ಜನೌಷಧಿ ಕೇಂದ್ರವನ್ನು ಮುಚ್ಚುತ್ತಿರುವುದು ಸರಿಲ್ಲ. ಖಾಸಗಿ ಮೆಡಿಕಲ್‌ ಮಾಫಿಯಾಕ್ಕೆ ಮಾರಿ ಹೋಗಿರುವ ರಾಜ್ಯ ಸರ್ಕಾರ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ. ಇಂತಹ ಉದ್ಧಟತನ ಸರಿಯಲ್ಲ ಎಂದು ಕಿಡಿಕಾರಿದ್ರು. ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕೆ ಇಳಿದ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿ.ಎಂ.ಸಿದ್ದರಾಮಯ್ಯ ಕಿಕ್ ಬ್ಯಾಕ್ ಮಾಡುತ್ತಿದ್ದಾರೆ ಎಂದು ನೇರ ಆರೋಪ ಮಾಡಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಬೈರಪ್ಪ,ಯತೀಶ್ ಗ್ಯಾಸ್ ಬಾಬು, ಬಲರಾಮಯ್ಯ, ಪ್ರಕಾಶ್. ಪಂಚಾಕ್ಷರಿ, ಪ್ರಮೋದ್, ಸಿದ್ದರಾಮಣ್ಣ ,ಕುಮಾರಣ್ಣ ಸೇರಿ ಹಲವು ಮುಖಂಡರು ಹಾಜರಿದ್ರು.

Author:

...
Keerthana J

Copy Editor

prajashakthi tv

share
No Reviews