ಚಿಕ್ಕನಾಯಕನಹಳ್ಳಿ : ಆಲದಕಟ್ಟೆ ವಾರ್ಡ್ ಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಆಯ್ಕೆ

ಚಿಕ್ಕನಾಯಕನಹಳ್ಳಿ : ಚಿಕ್ಕನಾಯಕನಹಳ್ಳಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯ್ತಿಯ ಆಲದಕಟ್ಟೆ ವಾರ್ಡ್‌ಗೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿ ಭರ್ಜರಿ ಜಯಗಳಿಸಿದ್ದಾರೆ. ಜೆಡಿಎಸ್ ಬೆಂಬಲಿತ ನಿಂಗರಾಜನಾಯ್ಕ ತೀವ್ರ ಪೈಪೋಟಿಯಲ್ಲಿ ಸುಮಾರು 394 ಮತಗಳನ್ನು ಪಡೆದು 90 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಆಲದಕಟ್ಟೆ ವಾರ್ಡ್‌ನ ಮಾಜಿ ಸದಸ್ಯ ಭೀಮನಾಯ್ಕ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿದ್ದು, ನಿಂಗರಾಜನಾಯ್ಕ ಆಯ್ಕೆಯಾಗಿದ್ದು, ಮುಂದಿನ ಎಂಟು ತಿಂಗಳ ಅವಧಿಗೆ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. ಬಳಿಕ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಗೆಲುವಿನ ಬಳಿಕ ಮಾತನಾಡಿದ ನಿಂಗರಾಜನಾಯ್ಕ, ಆಲದಕಟ್ಟೆ ಮತದಾರರಿಗೆ ಧನ್ಯವಾದಗಳು, ಈ ಉಪಚುನಾವಣೆಯ ಗೆಲುವು ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಮತ್ತಷ್ಟು ಬಲ ನೀಡಿದೆ. ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ಧರಾಗಿದ್ದೇವೆ ಎಂದರು. ನಿಂಗರಾಜನಾಯ್ಕ ಅವರ ಗೆಲುವಿಗೆ ಕಾರಣರಾದ ಕಾರ್ಯಕರ್ತರು, ಮುಖಂಡರು ಮತ್ತು ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ. ಸುರೇಶ್ ಬಾಬು ಅವರಿಗೆ ವಿಶೇಷವಾಗಿ ಧನ್ಯವಾದಗಳನ್ನು ಅರ್ಪಿಸಿದರು.

ಈ ವೇಳೆ  ಗ್ರಾಮ ಪಂಚಾಯಿತಿ ಅಧ್ಯಕ್ಷ ಗಂಗಾಧರಯ್ಯ, ಜೆಡಿಎಸ್ ಮುದ್ದೇನಹಳ್ಳಿ ಬೂತ್ ಕಮಿಟಿ ಅಧ್ಯಕ್ಷ ರಾಮಚಂದ್ರಪ್ಪ, ಪರಿಶಿಷ್ಟ ಪಂಗಡ ತಾಲ್ಲೂಕ ಘಟಕದ ಅಧ್ಯಕ್ಷ ಮಂಜುನಾಥ್, ಯುವ ಮುಖಂಡ ನಟರಾಜನಾಯ್ಕ ಮತ್ತು ಗ್ರಾ.ಪಂ. ಸದಸ್ಯರಾದ ಚಂದ್ರಶೇಖರಯ್ಯ, ಕಲ್ಪನಾ ರಮೇಶ್ ಸೇರಿ ಮೊದಲಾದವರು ಉಪಸ್ಥಿತರದ್ದರು.

Author:

...
Sushmitha N

Copy Editor

prajashakthi tv

share
No Reviews