ಕಲಬುರಗಿ : ಬಿಜೆಪಿಯಿಂದ ಕಲಬುರಗಿ ಚಲೋ | ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ ಕಿಡಿ

ಕಲಬುರಗಿ : ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಗೆ ಜಿಲ್ಲೆಯ ಚಿತ್ತಾಪುರದ ಗೆಸ್ಟ್‌ಹೌಸ್‌ನಲ್ಲೇ 5 ಗಂಟೆ ಕೂಡಿಹಾಕಿದ ಸಚಿವ ಪ್ರಿಯಾಂಕ್‌ ಖರ್ಗೆ ಬೆಂಬಲಿಗರು, ಕಾಂಗ್ರೆಸ್‌ ಕಾರ್ಯಕರ್ತರ ವರ್ತನೆಯಿಂದ ಕೆರಳಿರುವ ಭಾರತೀಯ ಜನತಾ ಪಕ್ಷ  ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧವಾಗಿ, ಇಂದು ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ವೃತ್ತದ ಬಳಿ ʼಕಲಬುರಗಿ ಚಲೋʼ ಪ್ರತಿಭಟನೆಯನ್ನು ನಡೆಸಿತು. ಈ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ  ನಾರಾಯಣಸ್ವಾಮಿ ಅವರು ಭಾಗವಹಿಸಿದ್ದರು. 

ಈ ವೇಳೆ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವರು ಶ್ರೀರಾಮುಲು ಮತ್ತು ಸಿ.ಟಿ. ರವಿ, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ದೊಡ್ಡನಗೌಡ ಹೆಚ್. ಪಾಟೀಲ್, ಪರಿಷತ್ ಸಚೇತಕ ನಾರಾಯಣ ಗೌಡ ಕೂಡ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ನಾಯಕರು, “ಸರ್ಕಾರ ಜನಸಾಮಾನ್ಯರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಅಪಾಯಕಾರಿ ಕಾನೂನು ಬದಲಾವಣೆಗಳು, ಧರ್ಮದ ನೆಲೆಯಲ್ಲಿ ಹಿಂಸೆ, ಆಡಳಿತಾತ್ಮಕ ವಿಫಲತೆಗಳನ್ನು ನಾವು ಸುಮ್ಮನೆ ನೋಡುವುದಿಲ್ಲ. ಕಾಂಗ್ರೆಸ್‌ ಸರ್ಕಾರ ಜನತೆಯ ಆಶಯಗಳಿಗೆ ವಿರೋಧವಾಗಿ ನಡೆದುಕೊಳ್ಳುತ್ತಿದೆ" ಎಂದು ಆರೋಪಿಸಿದರು.

 

Author:

...
Sushmitha N

Copy Editor

prajashakthi tv

share
No Reviews