KALABURAGI : ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸಾವಳೇಶ್ವರ್ ಕ್ರಾಸ್ ಬಳಿ ಕಳೆದ ರಾತ್ರಿ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹತ್ಯೆಗೀಡಾದ ಯುವಕನನ್ನು ಸುಧಾಕರ (25) ಎಂದು ಗುರುತಿಸಲಾಗಿದ್ದು, ಮೃತ ಯುವಕ ಆಳಂದ ತಾಲೂಕಿನ ಧುತ್ತರಗಾವ್ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ಯುವಕನನ್ನು ರಾತ್ರಿ ಕರೆಸಿ, ಕಾಲನ್ನು ಕಟ್ಟಿ ತೀವ್ರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.
ಹಳೆ ದ್ವೇಷವೇ ಈ ಹತ್ಯೆಗೆ ಕಾರಣವಿರಬಹುದೆಂಬ ಶಂಕೆ ಮೂಡಿದ್ದು, ಸ್ಥಳಕ್ಕೆ ಆಳಂದ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಸ್ಥಳ ಪರಿಶೀಲನೆ ನಡೆಸಿದ್ದು, ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.