Karnataka : ಆಗಸ್ಟ್‌ 15 ರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್‌ ನಿಷೇಧ

KARNATAKA : ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಆಗಸ್ಟ್‌ 15 ರಿಂದ ನೀರಿನ ಬಾಟಲ್‌ ಸೇರಿ ಎಲ್ಲ ರೀತಿಯ ಪ್ಲಾಸ್ಟಿಕ್‌ಗಳ ಬಳಕೆ ನಿಷೇಧಿಸಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಜರಾಯಿ ಇಲಾಖೆ ಅಧೀನಕ್ಕೆ ಬರುವ ಎಲ್ಲಾ ದೇವಸ್ಥಾನಗಳಲ್ಲಿ ಮಾತ್ರವಲ್ಲದೇ, ಎಲ್ಲಾ ದೇವಸ್ಥಾನಗಳಲ್ಲಿಯೂ ಪ್ಲಾಸ್ಟಿಕ್‌ ನಿಷೇಧಿಸುವಂತೆ ಆದೇಶ ಹೊರಡಿಸಲಾಗಿದೆ.

ಇನ್ನು ಸರ್ಕಾರ ನಿಷೇಧ ಜಾರಿಗೆ ಎರಡು ತಿಂಗಳು ಸಮಯ ನೀಡಿದ್ದು, ದೇವಸ್ಥಾನಗಳಲ್ಲಿ ಈಗಾಗಲೇ ಪ್ಲಾಸ್ಟಿಕ್‌ ವಸ್ತುಗಳನ್ನು ಖರೀದಿಸಿದ್ದರೆ, ಅವುಗಳನ್ನು ಬಳಕೆ ಮಾಡಬಹುದು. ಆ ನಂತರ ಪ್ಲಾಸ್ಟಿಕ್‌ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಈ ನಿಷೇಧದ ಮೂಲಕ, ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ವಚ್ಛತೆ ಕಾಪಾಡಲು ಹಾಗೂ ಭಕ್ತರ ಆರೋಗ್ಯದ ರಕ್ಷಣೆಗೆ ಪ್ರಯತ್ನಿಸಲು ನಿರ್ಧರಿಸಲಾಗಿದೆ. ಮುಜರಾಯಿ ಇಲಾಖೆ ಈ ನಿಷೇಧ ಜಾರಿಗೆ ಎರಡು ತಿಂಗಳ ಸಮಯ ನೀಡಿದ್ದು, ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ

 

Author:

...
Sushmitha N

Copy Editor

prajashakthi tv

share
No Reviews