ಕಾರು ಹಾಗೂ ದ್ವಿಚಕ್ರವಾಹನದ ನಡುವೆ ಡಿಕ್ಕಿಯಾ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬಟ್ಟುವಾರಪಲ್ಲಿ ಕ್ರಾಸ್ನಲ್ಲಿ ಈ ಘಟನೆ ಸಂಬವಿಸಿದ್ದು, ಮೃತ ವ್ಯಕ್ತಿ ಸೊಣ್ಣಕಲ್ಲು ಗ್ರಾಮದ ಫಾರೆಸ್ಟ್ ವಾಚರ್ ನರಸಿಂಹ ಎಂದು ಗುರುತಿಸಲಾಗಿದೆ.
ಕಳೆದ 5 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಕೂಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ನರಸಿಂಹ ಇಂದು 10 ಗಂಟೆ ಸುಮಾರಿಗೆ ಕೆಲಸಕ್ಕೆ ತೆರಳುವ ವೇಳೆ ಬೈಕ್ ಅಪಘಾತ ಸಂಭವಿಸಿದೆ. ಇನ್ನೂ ಕಾರು ಹಾಗೂ ಚಾಲಕನನ್ನ ರಾಯಲ್ಪಾಡು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಈ ಸಂಬಂಧ ಪ್ರಕರಣವನ್ನು ರಾಯಲ್ಪಾಡು ಪೊಲೀಸರು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.