ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಬಸ್ ನಿಲ್ದಾಣದ ಕಾಂಪೌಂಡಿನ ಬಳಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಬಸ್ ನಿಲ್ದಾಣದ ಕಾಂಪೌಂಡಿನ ಎರಡು ಸರಳಿನ ಮಧ್ಯೆ ಯುವಕನ ಕುತ್ತಿಗೆ ಸಿಲುಕಿರುವ ರೀತಿಯಲ್ಲಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಶವ ಕಂಡುಬಂದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.