ಕೊರಟಗೆರೆ: ಭೀಕರ ಅಪಘಾತ | ಸ್ಥಳದಲ್ಲೇ ಸವಾರನ ದುರ್ಮರಣ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ತುಮಕೂರು

ಕೊರಟಗೆರೆ:

ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಕೊರಟಗೆರೆ ತಾಲೂಕಿನ ಜಿ.ನಾಗೇನಹಳ್ಳಿ ಬಳಿ ಇರುವ ಸೌತೆಕಾಯಿ ಫ್ಯಾಕ್ಟರಿ ಬಳಿ ಈ ಅಪಘಾತ ಸಂಭವಿಸಿದೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಕೊರಟಗೆರೆ ಪಟ್ಟಣದ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶದ ಬಾಳೆಕಟ್ಟೆಯ ಗುಡಿಬಂಡೆ ಮೂಲದ ಮಂಜುನಾಥ್‌ ಮೃತ ದುರ್ದೈವಿಯಾಗಿದ್ದಾನೆ. ಇನ್ನು ಅಪಘಾತ ಸಂಭವಿಸುತ್ತಿದ್ದಂತೆ ಕಾರಿನ ಚಾಲಕ ಕಾರಿನ ಸಮೇತ ಸ್ಥಳದಿಂದ ಎಸ್ಕೇಪ್‌ ಆಗಿದ್ದಾನೆ.

ಸ್ಥಳಕ್ಕೆ ಕೊರಟಗೆರೆ ಇನ್‌ಸ್ಪೆಕ್ಟರ್‌ ಚೇತನ್‌ ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೊರಟಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾದ ಕಾರು ಚಾಲಕನಿಗೆ ಹುಡುಕಾಟ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸುವ ಕೆಲಸ ಮಾಡಲಾಗುತ್ತಿದೆ.

Author:

share
No Reviews