ಕೊರಟಗೆರೆ : ರಾಜ್ಯಾದ್ಯಂತ ಪೌರಕಾರ್ಮಿಕರ ಮುಷ್ಕರ | ಪ.ಪಂಚಾಯಿತಿಗೆ ಬೀಗ ಜಡಿದು ಆಕ್ರೋಶ

ಕೊರಟಗೆರೆ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪೌರಕಾರ್ಮಿಕರು ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಕೊರಟಗೆರೆಯಲ್ಲಿ ಪೌರಕಾರ್ಮಿಕರು ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಬಂದ್ ಮಾಡಿ ಮುಷ್ಕರಕ್ಕೆ ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯ ಪೌರನೌಕರರ ಸಂಘದಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವದಿ ಮುಷ್ಕರ ನಡೆಯುತ್ತಿದೆ. ಅದರಂತೆ ಇಂದು ಕೊರಟಗೆರೆ ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಬೀಗ ಹಾಕಿ, ಬಾಬ ಸಾಹೇಬ್‌ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಫೂಜೆ ಸಲ್ಲಿಸಿ ಅನಿರ್ಧಿಷ್ಟಾವದಿ ಮುಷ್ಕರಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಪೌರಕಾರ್ಮಿಕರು, ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಹಾಗೇ ಕೆಜಿಡಿ, ಸಂಜೀವಿನಿ ಆರೋಗ್ಯ ಯೋಜನೆ, ವೇತನ ಸೇರಿದಂತೆ ಸರ್ಕಾರಿ ನೌಕರರಿಗೆ ನೀಡುವಂತೆ ನಮಗೂ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತೊಬ್ಬ ಪೌರಕಾರ್ಮಿಕರು ಮಾತನಾಡಿ, ಸರ್ಕಾರಗಳು ನಮ್ಮ ಬೇಡಿಕೆಗಳನ್ನು ಈಡೇರಿಸದೇ ಮಲತಾಯಿ ಧೋರಣೆಯನ್ನು ತೋರುತ್ತಿವೆ. ನಮ್ಮನ್ನು ಖಾಯಂ ನೌಕರರೆಂದು ಪರಿಗಣಿಸಬೇಕು. ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಅಲ್ಲಿಯವರೆಗೂ ನಮ್ಮ ಮುಷ್ಕರವನ್ನು ಕೈಬಿಡುವುದಿಲ್ಲ ಎಂದರು.

ಅದೇನೇ ಇರಲಿ ಹಲವು ವರ್ಷಗಳಿಂದ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಎಂದು ಹೋರಾಟ ಮಾಡುತ್ತಿದ್ದಾರೆ. ಆದರೆ ಸರ್ಕಾರಗಳು ಮಾತ್ರ ನೆಪಮಾತ್ರಕ್ಕೆ ಭಾಷಣಗಳನ್ನು ಮಾಡಿ ಭರವಸೆ ನೀಡಿ ಸುಮ್ಮನಾಗುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಿ, ಅವರ ಬೇಡಿಕೆಗಳನ್ನು ಈಡೇರಿಸುತ್ತಾ ಸರ್ಕಾರ ಎಂದು ಕಾದು ನೋಡಬೇಕಿದೆ

Author:

...
Sushmitha N

Copy Editor

prajashakthi tv

share
No Reviews