ರಾಮನಗರ : ತಿರುವಿನಲ್ಲಿ ನಿಯಂತ್ರಣ ತಪ್ಪಿ ಎರಡು ಬೈಕ್ಗಳಿಗೆ ಗುದ್ದಿ ಕೆಎಸ್ಆರ್ಟಿಸಿ ಬಸ್ ಹಳ್ಳಕ್ಕೆ ಮಗುಚಿದ ಪರಿಣಾಮ ಬೈಕ್ನಲ್ಲಿದ್ದ ಸಬ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಬೆಂಗಳೂರಿನ ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಬಳಿ ನಡೆದಿದೆ.
ಇನ್ನು ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಎದುರು ಬರುತ್ತಿದ್ದ ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದು ನಂತರ ಹಳ್ಳಕ್ಕೆ ಮಗುಚಿ ಬಿದ್ದಿದೆ.ಅಪಘಾತದಲ್ಲಿ ಬೈಕ್ನಲ್ಲಿದ್ದ ಎಲೆಕ್ಟ್ರಾನಿಕ್ ಸಿಟಿಯ ಸಬ್ ಇನ್ಸ್ಪೆಕ್ಟರ್ ನಾಗರಾಜು ಮೃತಪಟ್ಟಿದ್ದಾರೆ. ಇನ್ನು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.