GUBB NEWS : ಗುಬ್ಬಿ ತಾಲೂಕಿನ ಕಸಬ ಹೋಬಳಿಯ ಲಕ್ಕೇನಹಳ್ಳಿ ಗ್ರಾಮದಲ್ಲಿ ಎಲ್ಕೆಜಿ, ಯುಕೆಜಿ ಪೂರ್ವ ಪ್ರಾಥಮಿಕ ಶಾಲೆಯನ್ನು ಶಾಸಕ ಎಸ್.ಆರ್ ಶ್ರೀನಿವಾಸ್ ಉದ್ಘಾಟಿಸಿದ್ರು. ಶಾಲೆ ಉದ್ಘಾಟನೆಗೆ ಲಕ್ಕೇನಹಳ್ಳಿ ಗ್ರಾಮಕ್ಕೆ ಬಂದ ಶಾಸಕ ಎಸ್. ಆರ್ ಶ್ರೀನಿವಾಸ್ಗೆ ಗ್ರಾಮಸ್ಥರು ಪಟಾಕಿ ಸಿಡಿಸಿ, ಅದ್ಧೂರಿಯಾಗಿ ಸ್ವಾಗತ ಕೋರಿದ್ರು. ಈ ವೇಳೆ ಮಾತನಾಡಿದ ಶಾಸಕ ಶ್ರೀನಿವಾಸ್, ಸರ್ಕಾರಿ ಶಾಲೆಯಲ್ಲಿ ಎಲ್ ಕೆಜಿ, ಯಕೆಜಿ ಪ್ರಾರಂಭ ಮಾಡಿರುವುದು ಸುಗ್ಗನಪಾಳ್ಯ ನಂತರದಲ್ಲಿ ಲಕ್ಕೇನಹಳ್ಳಿ ಗ್ರಾಮದಲ್ಲಿ ಆರಂಭವಾಗಿದೆ. ಇಲ್ಲಿ ಗ್ರಾಮಸ್ಥರ ಸಹಕಾರ ಕೂಡ ಮೆಚ್ಚುವಂತದ್ದು. 92 ಮಂದಿ ಜನರ ಆರ್ಥಿಕ ನೆರವು ಜೊತೆಗೆ ಶಾಲಾ ವಾಹನ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ ಎಂದ್ರು. ಶಿಕ್ಷಣ ಇಲಾಖೆಗೆ ಸರ್ಕಾರ 33 ಸಾವಿರ ಕೋಟಿ ಮೀಸಲಿಟ್ಟು ಅಭಿವೃದ್ದಿ ಮಾಡುತ್ತಿದೆ. ಎಲ್ಲಾ ರೀತಿಯ ಸವಲತ್ತು, ಬಿಸಿಯೂಟ, ಹಾಲು ಮೊಟ್ಟೆ ಇನ್ನಿತರ ಪೌಷ್ಟಿಕ ಆಹಾರ ನೀಡುತ್ತಿದೆ. ಎಲ್ಲವೂ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿದೆ ಎಂದ್ರು.
ಬಳಿಕ ಮಾತನಾಡಿದ ಅವರು, ಜಾಗತೀಕ ಯುಗದಲ್ಲಿ ಎಲ್ಲಾ ರಂಗದಲ್ಲೂ ಅಂಕ ಗಳಿಕೆಯೇ ಮಾನದಂಡವಾಗಿದೆ. ಆ ಕಾರಣ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಿ ಸರ್ಕಾರ, ಪೋಷಕರು, ಸಮುದಾಯ ಎಲ್ಲರೂ ಒತ್ತು ನೀಡಿದ್ದಾರೆ. ಈ ನಿಟ್ಟಿನಲ್ಲಿ ಪ್ರಸ್ತುತ ದಿನಮಾನದಲ್ಲಿ ಶಿಕ್ಷಣ ದಾನ ಶ್ರೇಷ್ಠ ದಾನ ಎನಿಸಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.
ಇನ್ನು ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಯೋಗೀಶ್, ಎಸ್ ಡಿಎಂಸಿ ಅಧ್ಯಕ್ಷ ಗೋವಿಂದರಾಜು, ಗ್ರಾಪಂ ಸದಸ್ಯರಾದ ಕೃಷ್ಣಮೂರ್ತಿ, ಮಹೇಂದ್ರಕುಮಾರ್, ಭಾಗ್ಯಮ್ಮ, ಶಿವಣ್ಣ, ಮಾಜಿ ಸದಸ್ಯ ದಿನಕರ್ ಮೂರ್ತಿ ಸೇರಿ ಹಲವರು ಉಪಸ್ಥಿತರಿದ್ದರು.