ಕೊಪ್ಪಳ : ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮದ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಔಷಧಿಗಳು ಮಣ್ಣುಪಾಲಾಗಿವೆ.
ಅಹಮದಾಬಾದಿನಿಂದ ಬೆಂಗಳೂರಿಗೆ ಔಷಧಿ ಸಾಗಿಸುತ್ತಿದ್ದ ಲಾರಿ, ಚಾಲಕನ ನಿದ್ದೆ ಮಂಪರಿನಿಂದ ಡಿವೈಡರ್ಗೆ ಗುದ್ದಿದೆ. ಡಿವೈಡರ್ಗೆ ಗುದ್ದಿದ ಪರಿಣಾಮ ಲಾರಿ ಪಲ್ಟಿಯಾಗಿ ಉರುಳಿದೆ. ಲಾರಿಯಲ್ಲಿ ತುಂಬಿದ್ದ ಔಷಧಿ ಬಾಕ್ಸ್ಗಳು ರಸ್ತೆಗೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಔಷಧಿ ಸಂಪೂರ್ಣ ನಾಶವಾಗಿದೆ.
ಇನ್ನು ಅಪಘಾತದಲ್ಲಿ ಚಾಲಕರು ಮೊಹಮ್ಮದ್ ಜಾಕಿರ್ ಹುಸೇನ್ ಮತ್ತು ಮೊಹಮ್ಮದ್ ಪಾಷಾ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆ ಬೇವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.