TURUVEKERE NEWS : ತುಮಕೂರು ಜಿಲ್ಲೆ ತುರುವೇಕೆರೆ ಕ್ಷೇತ್ರದಲ್ಲಿ ಬರುವ ಜೂನ್ 19ರಂದು ಭರ್ಜರಿಯಾದ ಪಕ್ಷ ಸಂಘಟನಾ ಕಾರ್ಯಕ್ರಮ ನಡೆಯಲಿದೆ. ಈ ಕುರಿತು ಇಂದು ಶಾಸಕ ಎಂ.ಟಿ. ಕೃಷ್ಣಪ್ಪ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, "ಪಕ್ಷದ ಬಲವರ್ಧನೆಗಾಗಿ ಎಲ್ಲರೂ ಕೈಜೋಡಿ ಸಬೇಕು. ‘ಮಿಸ್ ಕಾಲ್’ ಮೂಲಕ ಸದಸ್ಯತ್ವ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ" ಎಂದು ಹೇಳಿದರು. ಪಕ್ಷ ಸಂಘಟನೆಯ ಬಗ್ಗೆಯೂ ಸಮಗ್ರ ಚರ್ಚೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುತ್ರ, ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂಬ ನಿರೀಕ್ಷೆಯಿದೆ.
"ಸಾವಿರಾರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಪಕ್ಷ ಸಂಘಟನೆ, ಭವಿಷ್ಯದ ತಂತ್ರಗಳ ಬಗ್ಗೆ ಚರ್ಚೆ ನಡೆಯಲಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮ ಯಶಸ್ವಿ ಮಾಡಬೇಕು," ಎಂದು ಶಾಸಕರು ಮನವಿ ಮಾಡಿದರು.