Madhugiri : 1500 ಕೋಟಿ ಕಾಮಗಾರಿಗೆ ಸಿದ್ಧತೆ | ವಿ.ಸೋಮಣ್ಣ ಏನಂದ್ರು ಗೊತ್ತಾ?

MADHUGIRI : ಸುಮಾರು 1500 ಕೋಟಿ ವೆಚ್ಚದಲ್ಲಿ ಶಿರಾ-ಮಧುಗಿರಿ-ಚಿಕ್ಕಬಳ್ಳಾಪುರ ಮೂಲಕ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ಸಚಿವ ವಿ. ಸೋಮಣ್ಣ ಮಧುಗಿರಿಯಲ್ಲಿ ತಿಳಿಸಿದರು.  

ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಗ್ರಾಮದಲ್ಲಿ ನಡೆದ ವಿಕಸಿತ ಸಂಕಲ್ಪ, ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ಈಗಾಗಲೇ 600 ಕೋಟಿ ಬಿಡುಗಡೆ ಮಾಡಲಾಗಿದ್ದು, ಇನ್ನೆರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು, ಇದರಿಂದ ಈ ಭಾಗದ ಭೂಮಿಗೆ ಬಂಗಾರದ ಬೆಲೆ ಬರಲಿದ್ದು, ಈ ಭಾಗವು ಆರ್ಥಿಕವಾಗಿ ಅಭಿವೃದ್ಧಿ ಹೊಂದಲಿದೆ ಎಂದು ತಿಳಿಸಿದರು.

ಬಡವರಿಗೆ ಸವಲತ್ತು ತಲುಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ನಮಗೆ ಸೂಚಿಸಿದ್ದು, ಕೇಂದ್ರದ ಸವಲತ್ತುಗಳ ಬಗ್ಗೆ ಜನತೆಗೆ ಮಾಹಿತಿ ನೀಡಬೇಕು, ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಮತ್ತು ಗ್ರಾಮಸ್ಥರ ಸಮಸ್ಯೆ ಆಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಕೃಷಿ ಮತ್ತು ಸಂಶೋಧನಾ ಇಲಾಖೆಯ ಹಿರಿಯ ಅಧಿಕಾರಿ ರಾಘವೇಂದ್ರ ಭಟ್, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಮುಖಂಡ ಎಲ್.ಸಿ. ನಾಗರಾಜು, ಬಡವನಹಳ್ಳಿ ಗ್ರಾಪಂ ಅಧ್ಯಕ್ಷೆ ಭಾನುಪ್ರಿಯ, ತಾಲೂಕು ಬಿಜೆಪಿ ಅಧ್ಯಕ್ಷ ಹನುಮಂತರೆಡ್ಡಿ, ಜಿಪಂ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಶಿವಪ್ರಸಾದ್‌, ತಾಪಂ ಇಓ ಲಕ್ಷ್ಮಣ್ ಹಾಜರಿದ್ದರು.

Author:

...
Sushmitha N

Copy Editor

prajashakthi tv

share
No Reviews