Madhugiri : ದ್ವಿಚಕ್ರ ವಾಹನಗಳ ನಡುವೆ ಅಪಘಾತ | ಅಪಘಾತದಲ್ಲಿ ಓರ್ವನ ಸ್ಥಿತಿ ಗಂಭೀರ

MADHUGIRI : ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡು, ಮತ್ತೊರ್ವನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯಲ್ಲಿ ನಡೆದಿದೆ.

ತಾಲೂಕಿನ ಬೂದೇನಹಳ್ಳಿ ಗ್ರಾಮದ ಶನಿ ಮಹಾತ್ಮ ದೇವಸ್ಥಾನದ ಬಳಿ ಟಿವಿಎಸ್ ಎಕ್ಸೆಲ್ ಹಾಗೂ ಸ್ಪ್ಲೆಂಡರ್ ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ತಿಗಳರಹಳ್ಳಿ ಗ್ರಾಮದ 30 ವರ್ಷದ ಕೃಷ್ಣ ಎಂಬ ವ್ಯಕ್ತಿಯ ತಲೆ ಹಾಗೂ ಕಿವಿಗೆ ತೀವ್ರ ಪೆಟ್ಟುಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೊಂದು ವಾಹನ ಸವಾರ 32 ವರ್ಷದ ರಾಮಕುಮಾರ್ ಎಂಬಾತನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಪಿಎಸ್‌ಐ ಶ್ರೀನಿವಾಸ್ ಪ್ರಸಾದ್ ಭೇಟಿ ನೀಡಿ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.  ಗಾಯಾಳುಗಳಿಗೆ ಮಧುಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

Author:

...
Sushmitha N

Copy Editor

prajashakthi tv

share
No Reviews