Madhugiri : ಹಾಲು ಉತ್ಪಾದಕರ ಸಂಘ ಸ್ಥಾಪನೆ | ರಾಜೇಂದ್ರ ರಾಜಣ್ಣರಿಂದ ಚಾಲನೆ

MADHUGIRI : ಹೈನುಗಾರಿಕೆಯಲ್ಲಿ ತೊಡಗಿಕೊಳ್ಳುವವರು ಅರ್ಜಿ ಸಲ್ಲಿಸಿ, ಸಾಲ ಸೌಲಭ್ಯ ಪಡೆದು ಜೀವನದ ಆರ್ಥಿಕ ಮಟ್ಟ ಸುಧಾರಣೆ ಮಾಡಿಕೊಳ್ಳಬೇಕು ಎಂದು ವಿ.ಪ ಸದಸ್ಯ ಆರ್ ರಾಜೇಂದ್ರ ಮಧುಗಿರಿಯಲ್ಲಿ ತಿಳಿಸಿದರು.

ತಾಲ್ಲೂಕಿನ  ಮುತ್ತುರಾಯನಹಳ್ಳಿ ಗ್ರಾಮದಲ್ಲಿ ತಾಲ್ಲೂಕಿನ 174 ನೇ ಹಾಲು ಶೇಖರಣಾ ಘಟಕದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಡೈರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಹಾಗೂ ಗ್ರಾಮದ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಜೂನ್ 28 ರ ಶನಿವಾರ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹಾಗೂ ಗಣ್ಯರು ಮಧುಗಿರಿಗೆ ಆಗಮಿಸುತ್ತಿದ್ದು, ವಿವಿಧ ಇಲಾಖೆಗಳಿಂದ ಫಲಾನುಭವಿಗಳಿಗೆ ಸರ್ಕಾರಿ ಸೌಲಭ್ಯಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಫಲಾನುಭವಿಗಳಿಗೆ ಚೆಕ್ ವಿತರಿಸಿ ಸರ್ಕಾರಿ ಶಾಲಾ ಮಕ್ಕಳಿಗೆ ಸ್ವೇಟರ್ ನೀಡಲಾಯಿತು. ಈ ಸಂದರ್ಭದಲ್ಲಿ ತುಮುಲ್ ನಿರ್ದೇಶಕ ನಾಗೇಶ್ ಬಾಬು, ಕೆ.ಎಮ್.ಎಫ್. ನಿರ್ದೇಶಕ ಕಾಂತರಾಜು,  ಡಿ.ಸಿ.ಸಿ ಬ್ಯಾಂಕಿನ ಮೇಲ್ವಿಚಾರಕ ರಾಮಕೃಷ್ಣ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಂಗನಾಥ್ ಹಾಜರಿದ್ದರು.

Author:

...
Sushmitha N

Copy Editor

prajashakthi tv

share
No Reviews