Madhugiri : ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಕ್ರೀದ್ ಆಚರಿಸಿದ ಮುಸ್ಲಿಂ ಬಾಂಧವರು

MADHUGIRI : ಶಾಂತಿ, ತ್ಯಾಗ, ಬಲಿದಾನದ ಪ್ರತೀಕವಾದ ಬಕ್ರೀದ್‌ ಹಬ್ಬವನ್ನು ರಾಜ್ಯಾದ್ಯಂತ ಸಂಭ್ರಮ, ಸಡಗರದಿಂದ ಆಚರಣೆ ಮಾಡ್ತಿದ್ದಾರೆ. ಇತ್ತ ಮಧುಗರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬಕ್ರೀದ್‌ ಹಬ್ಬವನ್ನು ವಿಭಿನ್ನವಾಗಿ ಆಚರಣೆ ಮಾಡಿ ಗಮನ ಸೆಳೆದಿದ್ದಾರೆ. ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಗ್ರಾಮದಲ್ಲಿ ಮುಸ್ಲಿಂ ಬಾಂಧವರು ಸಂವಿಧಾನ ಶಿಲ್ಪಿ ಡಾ.ಬಿಆರ್‌ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಕ್ರೀದ್‌ ಹಬ್ಬವನ್ನು ಆಚರಣೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ತಾಲೂಕು ಪಂಚಾಯ್ತಿಯ ಮಾಜಿ ಸದಸ್ಯ ಜೆ.ಡಿ ವೆಂಕಟೇಶ್‌, ಹಿಂದೂ ಹಾಗೂ ಮುಸ್ಲಿಂರು ಸೇರಿ ಒಟ್ಟಾಗಿ ಹಬ್ಬ- ಹರಿದಿನಗಳು ಆಚರಣೆ ಮಾಡುವುದರಿಂದ, ಶಾಂತಿ ಮತ್ತು ಸೌಹಾರ್ದತೆಯಿಂದ ಬೆಳೆಯುತ್ತದೆ ಎಂದು ತಿಳಿಸಿದru. ಬಾಬಾ ಸಾಹೇಬರ ತತ್ವ ಸಿದ್ಧಾಂತಗಳನ್ನು ಪಾಲಿಸುತ್ತಾ ನಮ್ಮ ಭಾಗದಲ್ಲಿ ಹಬ್ಬಗಳನ್ನು ಒಟ್ಟಾಗಿ ಆಚರಣೆ ಮಾಡಿ ನಾವೆಲ್ಲಾ ಒಂದು ಎಂಬ ಸಂದೇಶವನ್ನು ನೀಡಲಾಗಿದೆ ಎಂದರು.

ಇನ್ನು ಈ ಸಂದರ್ಭದಲ್ಲಿ ಜಾಮಿಯಾ ಮಸೀದಿಯ ಅಧ್ಯಕ್ಷ ಶಾಮೀರ್ ಅಹಮದ್, ಕಾರ್ಯದರ್ಶಿ ಜಬಿವುಲ್ಲಾ, ಮುಖಂಡರಾದ ಆಕ್ರಮುಲ್ಲಾ,  ಗೌಸ್, ಗೋಪಾಲ್, ಜಬಿವುಲ್ಲಾ, ಮಕ್ತಿಯಾರ್, ಪಿ ಕೃಷ್ಣ ಸೇರಿದಂತೆ ಮುಖಂಡರು ಹಾಜರಿದ್ದರು.

Author:

...
Sushmitha N

Copy Editor

prajashakthi tv

share
No Reviews